ಓದುಗರ ಪತ್ರ
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…