Andolana originals

ಓದುಗರ ಪತ್ರ: ವಿವಾದಾತ್ಮಕ ಹೇಳಿಕೆ ನೀಡುವವರಿಗೆ ಕಡಿವಾಣ ಹಾಕಿ

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಸ್ಯಾಮ್ ಪಿಟ್ರೋಡಾ ಈಗ ಚೀನಾ ದೇಶವು ಭಾರತದ ವೈರಿ ದೇಶವಲ್ಲ ಎನ್ನುವ ಮೂಲಕ ಮತ್ತೊಂದು ಹೇಳಿಕೆ ಯಿಂದ ಟೀಕೆಗೆ ಗುರಿಯಾಗಿದ್ದಾರೆ. ಸ್ಯಾಮ್ ಪಿಟ್ರೋಡಾ ತಮ್ಮ ಸಾಧನೆಗಳಿಂದ ಸುದ್ದಿಯಾಗಿದ್ದಕ್ಕಿಂತ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ಅನುವಂಶೀಯ ಆಸ್ತಿಗೆ ತೆರಿಗೆ ವಿಧಿಸುವ ಕುರಿತು ಅವರು ವಿವಾದಾತ್ಮ ಹೇಳಿಕೆ ನೀಡಿದ್ದರು. ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿ ಚುನಾವಣೆಯಲ್ಲಿ ಕೆಲವು ನಿಶ್ಚಿತ ಸೀಟುಗಳನ್ನು ಕಳೆದುಕೊಳ್ಳುವಂತೆ ಮಾಡಿದ್ದರು. ಅದೂ ಸಾಲದು ಎಂಬಂತೆ ದಕ್ಷಿಣ ಭಾರತದವರು ಆಫ್ರಿಕಾದವರಂತೆ, ಪೂರ್ವದವರು ಚೀನಿಗಳಂತೆ, ಪಶ್ಚಿಮದವರು ಅರಬರಂತೆ ಮತ್ತು ಉತ್ತರದವರು ಬಿಳಿಯರಂತೆ ಕಾಣುತ್ತಾರೆ ಎಂದು ವರ್ಣ ದ್ವೇಷದ ಕಿಡಿ ಹಚ್ಚಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇವರಂತೆಯೇ ದಿಗ್ವಿಜಯ ಸಿಂಗ್, ಮಣಿಶಂಕರ್ ಅಯ್ಯರ್ ಸೇರಿದಂತೆ ಕೆಲವು ಹಿರಿಯ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿ ತಮ್ಮ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುತ್ತಾರೆ. ದುರ್ದೈವವೆಂದರೆ ಕಾಂಗ್ರೆಸ್ ಹೈಕಮಾಂಡ್ ಇಂಥವರ ಬಾಯಿ ಮುಚ್ಚಿಸುವಲ್ಲಿ ವಿಫಲವಾಗಿದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

11 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

11 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

11 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

11 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

12 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

12 hours ago