ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಸ್ಯಾಮ್ ಪಿಟ್ರೋಡಾ ಈಗ ಚೀನಾ ದೇಶವು ಭಾರತದ ವೈರಿ ದೇಶವಲ್ಲ ಎನ್ನುವ ಮೂಲಕ ಮತ್ತೊಂದು ಹೇಳಿಕೆ ಯಿಂದ ಟೀಕೆಗೆ ಗುರಿಯಾಗಿದ್ದಾರೆ. ಸ್ಯಾಮ್ ಪಿಟ್ರೋಡಾ ತಮ್ಮ ಸಾಧನೆಗಳಿಂದ ಸುದ್ದಿಯಾಗಿದ್ದಕ್ಕಿಂತ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ಅನುವಂಶೀಯ ಆಸ್ತಿಗೆ ತೆರಿಗೆ ವಿಧಿಸುವ ಕುರಿತು ಅವರು ವಿವಾದಾತ್ಮ ಹೇಳಿಕೆ ನೀಡಿದ್ದರು. ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿ ಚುನಾವಣೆಯಲ್ಲಿ ಕೆಲವು ನಿಶ್ಚಿತ ಸೀಟುಗಳನ್ನು ಕಳೆದುಕೊಳ್ಳುವಂತೆ ಮಾಡಿದ್ದರು. ಅದೂ ಸಾಲದು ಎಂಬಂತೆ ದಕ್ಷಿಣ ಭಾರತದವರು ಆಫ್ರಿಕಾದವರಂತೆ, ಪೂರ್ವದವರು ಚೀನಿಗಳಂತೆ, ಪಶ್ಚಿಮದವರು ಅರಬರಂತೆ ಮತ್ತು ಉತ್ತರದವರು ಬಿಳಿಯರಂತೆ ಕಾಣುತ್ತಾರೆ ಎಂದು ವರ್ಣ ದ್ವೇಷದ ಕಿಡಿ ಹಚ್ಚಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇವರಂತೆಯೇ ದಿಗ್ವಿಜಯ ಸಿಂಗ್, ಮಣಿಶಂಕರ್ ಅಯ್ಯರ್ ಸೇರಿದಂತೆ ಕೆಲವು ಹಿರಿಯ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿ ತಮ್ಮ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುತ್ತಾರೆ. ದುರ್ದೈವವೆಂದರೆ ಕಾಂಗ್ರೆಸ್ ಹೈಕಮಾಂಡ್ ಇಂಥವರ ಬಾಯಿ ಮುಚ್ಚಿಸುವಲ್ಲಿ ವಿಫಲವಾಗಿದೆ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…