Andolana originals

ಓದುಗರ ಪತ್ರ: ವಿವಾದಾತ್ಮಕ ಹೇಳಿಕೆ ನೀಡುವವರಿಗೆ ಕಡಿವಾಣ ಹಾಕಿ

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಸ್ಯಾಮ್ ಪಿಟ್ರೋಡಾ ಈಗ ಚೀನಾ ದೇಶವು ಭಾರತದ ವೈರಿ ದೇಶವಲ್ಲ ಎನ್ನುವ ಮೂಲಕ ಮತ್ತೊಂದು ಹೇಳಿಕೆ ಯಿಂದ ಟೀಕೆಗೆ ಗುರಿಯಾಗಿದ್ದಾರೆ. ಸ್ಯಾಮ್ ಪಿಟ್ರೋಡಾ ತಮ್ಮ ಸಾಧನೆಗಳಿಂದ ಸುದ್ದಿಯಾಗಿದ್ದಕ್ಕಿಂತ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ವೇಳೆ ಅನುವಂಶೀಯ ಆಸ್ತಿಗೆ ತೆರಿಗೆ ವಿಧಿಸುವ ಕುರಿತು ಅವರು ವಿವಾದಾತ್ಮ ಹೇಳಿಕೆ ನೀಡಿದ್ದರು. ಆ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗುವಂತೆ ಮಾಡಿ ಚುನಾವಣೆಯಲ್ಲಿ ಕೆಲವು ನಿಶ್ಚಿತ ಸೀಟುಗಳನ್ನು ಕಳೆದುಕೊಳ್ಳುವಂತೆ ಮಾಡಿದ್ದರು. ಅದೂ ಸಾಲದು ಎಂಬಂತೆ ದಕ್ಷಿಣ ಭಾರತದವರು ಆಫ್ರಿಕಾದವರಂತೆ, ಪೂರ್ವದವರು ಚೀನಿಗಳಂತೆ, ಪಶ್ಚಿಮದವರು ಅರಬರಂತೆ ಮತ್ತು ಉತ್ತರದವರು ಬಿಳಿಯರಂತೆ ಕಾಣುತ್ತಾರೆ ಎಂದು ವರ್ಣ ದ್ವೇಷದ ಕಿಡಿ ಹಚ್ಚಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಇವರಂತೆಯೇ ದಿಗ್ವಿಜಯ ಸಿಂಗ್, ಮಣಿಶಂಕರ್ ಅಯ್ಯರ್ ಸೇರಿದಂತೆ ಕೆಲವು ಹಿರಿಯ ನಾಯಕರು ವಿವಾದಾತ್ಮಕ ಹೇಳಿಕೆ ನೀಡಿ ತಮ್ಮ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿರುತ್ತಾರೆ. ದುರ್ದೈವವೆಂದರೆ ಕಾಂಗ್ರೆಸ್ ಹೈಕಮಾಂಡ್ ಇಂಥವರ ಬಾಯಿ ಮುಚ್ಚಿಸುವಲ್ಲಿ ವಿಫಲವಾಗಿದೆ.

-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago