ಓದುಗರ ಪತ್ರ
ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಹುಲಿಯೊಂದು ಆಗಾಗ್ಗೆ ದಾಳಿ ನಡೆಸಿ ಹಸುಗಳನ್ನು ಬಲಿ ಪಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಕೆಲ ದಿನಗಳ ಹಿಂದಷ್ಟೇ ಎಚ್.ಮಹದೇವೇಗೌಡ ಎಂಬವರು ಜಮೀನಿನಿಂದ ಮನೆಗೆ ಹಸುಗಳನ್ನು ಹಿಡಿದು ಕೊಂಡು ಹೋಗುವಾಗ ಹುಲಿ ದಾಳಿ ನಡೆಸಿ ಹಸುವನ್ನು ಕೊಂದುಹಾಕಿತ್ತು. ಈ ಘಟನೆಯಿಂದಾಗಿ ಗ್ರಾಮಸ್ಥರು ಜಮೀನುಗಳಿಗೆ ಹೋಗಲು ಹೆದರು ವಂತಾಗಿದ್ದು, ಕಳೆದ 3 ತಿಂಗಳುಗಳಿಂದ ಆಗಾಗ್ಗೆ ದಾಳಿ ಮಾಡುತ್ತಿರುವ ಈ ಹುಲಿ ಈವರೆಗೂ 8-10 ಜಾನುವಾರುಗಳನ್ನು ಬಲಿ ಪಡೆದಿದೆ. ಪ್ರತಿಬಾರಿಯೂ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದು ಮಹಜರು ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡುವ ಜತೆಗೆ ಕ್ಯಾಮೆರಾಗಳನ್ನು ಅಳವಡಿಸಿ ಹೋಗುತ್ತಾರೆಯೇ ವಿನಾ ಹುಲಿ ಸೆರೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಭಾಗದ ರೈತರು ಮುಂಜಾನೆಯ ನಸುಕಿನಿಂದ ಹಿಡಿದು ಸಂಜೆ ಕತ್ತಲು ಆವರಿಸುವವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಈ ವೇಳೆ ಅನೇಕರಿಗೆ ಹುಲಿ ಕಾಣಿಸಿಕೊಂಡಿದೆ. ಈಗ ಹಸುಗಳ ಮೇಲೆ ದಾಳಿ ಮಾಡುತ್ತಿರುವ ಹುಲಿ ಮುಂದೆ ಜನರ ಮೇಲೂ ದಾಳಿ ಮಾಡಿದರೆ ಯಾರು ಹೊಣೆ? ಆದ್ದರಿಂದ ಅರಣ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹುಲಿ ಸೆರೆಗೆ ಕ್ರಮವಹಿಸಬೇಕಿದೆ.
-ಚೇತನ್ ಕುಮಾರ್, ಸರಗೂರು ತಾ.
ನೆಲಮಂಗಲ: ಕೆನಡಾ ದೇಶದಲ್ಲಿ ಕನ್ನಡಿಗನನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ಕೊಲೆ ಮಾಡಿರುವ ಆರೋಪಿ ಭಾವಚಿತ್ರವನ್ನು ಕೆನಡಾದ ಟೊರಂಟೊ ಪೊಲೀಸರು…
ಕೊಡಗು: ಸಂಸದ ಯದುವೀರ್ ಕೃಷ್ಣದತತ ಚಾಮರಾಜ ಒಡೆಯರ್ ಅವರ ಪರಿಶ್ರಮದ ಫಲವಾಗಿ ಕೊಡಗಿನಲ್ಲಿ ಪಾಸ್ಪೋರ್ಟ್ ಮೇಳ ಆಯೋಜಿಸಲು ಬೆಂಗಳೂರು ವಿಭಾಗೀಯ…
ಟೆಹರಾನ್: ಇರಾನ್ ಸರ್ವೋಚ್ಛ ನಾಯಕರಾಗಿದ್ದ ಅಯತೊಲ್ಲಾ ಅಲಿ ಖಮೇನಿಯವರು ಮಗ ಉತ್ತರಾಧಿಕಾಗಲು ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಇರಾನ್ನ ಮುಂದಿನ ಸರ್ವೋಚ್ಛ…
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಿಗ್ ಬಜೆಟ್ ಸಿನಿಮಾ ಟಾಕ್ಸಿಕ್ ಇರಾನ್- ಇಸ್ರೇಲ್ ಯುದ್ಧದ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಮಾರ್ಚ್.19ರಂದು ಬಿಡುಗಡೆಯಾಗಬೇಕಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…