ಓದುಗರ ಪತ್ರ
ಸರಗೂರು ತಾಲ್ಲೂಕಿನ ಹೆಗ್ಗನೂರು ಗ್ರಾಮದಲ್ಲಿ ಕಳೆದ 2-3 ತಿಂಗಳುಗಳಿಂದ ಹುಲಿಯೊಂದು ಆಗಾಗ್ಗೆ ದಾಳಿ ನಡೆಸಿ ಹಸುಗಳನ್ನು ಬಲಿ ಪಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.
ಕೆಲ ದಿನಗಳ ಹಿಂದಷ್ಟೇ ಎಚ್.ಮಹದೇವೇಗೌಡ ಎಂಬವರು ಜಮೀನಿನಿಂದ ಮನೆಗೆ ಹಸುಗಳನ್ನು ಹಿಡಿದು ಕೊಂಡು ಹೋಗುವಾಗ ಹುಲಿ ದಾಳಿ ನಡೆಸಿ ಹಸುವನ್ನು ಕೊಂದುಹಾಕಿತ್ತು. ಈ ಘಟನೆಯಿಂದಾಗಿ ಗ್ರಾಮಸ್ಥರು ಜಮೀನುಗಳಿಗೆ ಹೋಗಲು ಹೆದರು ವಂತಾಗಿದ್ದು, ಕಳೆದ 3 ತಿಂಗಳುಗಳಿಂದ ಆಗಾಗ್ಗೆ ದಾಳಿ ಮಾಡುತ್ತಿರುವ ಈ ಹುಲಿ ಈವರೆಗೂ 8-10 ಜಾನುವಾರುಗಳನ್ನು ಬಲಿ ಪಡೆದಿದೆ. ಪ್ರತಿಬಾರಿಯೂ ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಬಂದು ಮಹಜರು ನಡೆಸಿ ಪರಿಹಾರ ಕೊಡಿಸುವ ಭರವಸೆ ನೀಡುವ ಜತೆಗೆ ಕ್ಯಾಮೆರಾಗಳನ್ನು ಅಳವಡಿಸಿ ಹೋಗುತ್ತಾರೆಯೇ ವಿನಾ ಹುಲಿ ಸೆರೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಈ ಭಾಗದ ರೈತರು ಮುಂಜಾನೆಯ ನಸುಕಿನಿಂದ ಹಿಡಿದು ಸಂಜೆ ಕತ್ತಲು ಆವರಿಸುವವರೆಗೂ ಜಮೀನಿನಲ್ಲಿ ಕೆಲಸ ಮಾಡುತ್ತಾರೆ. ಈ ವೇಳೆ ಅನೇಕರಿಗೆ ಹುಲಿ ಕಾಣಿಸಿಕೊಂಡಿದೆ. ಈಗ ಹಸುಗಳ ಮೇಲೆ ದಾಳಿ ಮಾಡುತ್ತಿರುವ ಹುಲಿ ಮುಂದೆ ಜನರ ಮೇಲೂ ದಾಳಿ ಮಾಡಿದರೆ ಯಾರು ಹೊಣೆ? ಆದ್ದರಿಂದ ಅರಣ್ಯ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹುಲಿ ಸೆರೆಗೆ ಕ್ರಮವಹಿಸಬೇಕಿದೆ.
-ಚೇತನ್ ಕುಮಾರ್, ಸರಗೂರು ತಾ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…