Categories: Andolana originals

ಓದುಗರ ಪತ್ರ: ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಿ

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಅಂಚಿನಲ್ಲಿರುವ ಎಚ್‌.ಡಿ.ಕೋಟೆ, ಸರಗೂರು ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೀವಹಾನಿಗಳಾಗುತ್ತಿವೆ. ಇತ್ತೀಚೆಗೆ ಎಚ್.ಡಿ. ಕೋಟೆ ಪಟ್ಟಣದ ಸಮೀಪರೆ 3-4 ಹುಲಿಗಳು ಒಟ್ಟಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದರೆ, ಒಂದೇ ತಿಂಗಳಿನಲ್ಲಿ ನಾಲ್ಕು ಚಿರತೆಗಳು ಅರಣ್ಯ ಇಲಾಖೆಯ ಬೋನಿನಲ್ಲಿ ಬಿದ್ದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಇನ್ನು ಸರಗೂರು ಭಾಗದಲ್ಲಂತೂ ಆಗಾಗ್ಗೆ ಕಾಡಾನೆ ಹಾಗೂ ಹುಲಿಗಳ ದಾಳಿ ನಡೆಯುತ್ತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಜತೆಗೆ ಅನೇಕ ರೈತರೂ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿಗೆ ಸರಗೂರಿನ ಹೆಗ್ಗನೂರು ಗ್ರಾಮದಲ್ಲಿಯೂ ನಿರಂತರವಾಗಿ ಹುಲಿಯೊಂದು ದಾಳಿ ನಡೆಸಿ ನಾಲ್ಕೈದು ಜಾನುವಾರುಗಳನ್ನು ಬಲಿಪಡೆದಿತ್ತು. ಇತ್ತ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ವರ್ಷದ ಹಿಂದೆ ರತ್ನಮ್ಮ ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿ ಬಲಿ ಪಡೆದಿತ್ತು. ಈಗ ಅದೇ ಸ್ಥಳದಲ್ಲಿ ಹುಲಿ ಹಸುವೊಂದನ್ನು ಬಲಿ ಪಡೆದಿದೆ. ಇತ್ತೀಚೆಗೆ ಕಾಡಂಚಿನ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಜಮೀನುಗಳಿಗೆ ಹೋಗಲು, ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡಲೂ ಆತಂಕ ಪಡುವಂತಾಗಿದೆ. ಕಾಡುಪ್ರಾಣಿಗಳು ಕಾಣಿಸಿಕೊಂಡಾಗ ಅರಣ್ಯ ಇಲಾಖೆಯವರು ಅವುಗಳನ್ನು ಹಿಡಿಯುವ ಭರವಸೆ ನೀಡುತ್ತಾರಾದರೂ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮವಹಿಸುವುದಿಲ್ಲ. ಆದ್ದರಿಂದ ಆಯಾ ಭಾಗದ ಶಾಸಕರು ಈ ಬಗ್ಗೆ ಗಮನಹರಿಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.
-ಸಂಜಯ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

‘ಸಾವಿನ ನಂತರವೂ ಜನಮಾನಸದಲ್ಲಿ ಉಳಿದ ವೀರಭದ್ರಪ್ಪ’

ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ  ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು…

1 hour ago

ಓದುಗರ ಪತ್ರ: ಮಹಿಳೆ ವಿವಸ ಪ್ರಕರಣ ತನಿಖೆಯಲ್ಲಿ ಪೂರ್ವಗ್ರಹ ಬೇಡ

ಹುಬ್ಬಳ್ಳಿಯಲ್ಲಿ ನಡೆದ ಮಹಿಳೆಯ ವಿವಸ ಪ್ರಕರಣ ಅತ್ಯಂತ ಅಮಾನವೀಯವಾದುದು. ಸಂತ್ರಸ್ತ ಮಹಿಳೆ ಬಿಜೆಪಿಯೋ, ಕಾಂಗ್ರೆಸ್ಸೋ ಎನ್ನುವುದು ನಂತರದ ವಿಚಾರ. ಮೊದಲಿಗೆ…

1 hour ago

ಓದುಗರ ಪತ್ರ: ಶಾಲೆ ಬಳಿಯೇ ಕಸದ ಗುಡ್ಡೆ!

ನಂಜನಗೂಡು ಬಜಾರ್ ರಸ್ತೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಇದೆ. ಇದನ್ನು ದಳವಾಯಿ ಶಾಲೆ…

1 hour ago

ಓದುಗರ ಪತ್ರ: ಬಹುರೂಪಿ ಬಾಬಾಸಾಹೇಬ್… ಅರ್ಥಪೂರ್ಣ ಆಶಯ

ಮೈಸೂರಿನ ರಂಗಾಯಣದಲ್ಲಿ ಜ.೧೧ರಿಂದ ಆರಂಭವಾಗಲಿರುವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಧ್ಯೇಯವಾಕ್ಯ ಅತ್ಯಂತ ಸಮಂಜಸವಾಗಿದೆ. ‘ಬಾಬಾಸಾಹೇಬ್ -ಸಮತೆಯೆಡೆಗೆ ನಡಿಗೆ’ ಎಂಬ ಆಶಯದ…

1 hour ago

ದೊಡ್ಡ ಹೆಜ್ಜೂರು ಆಂಜನೇಯಸ್ವಾಮಿ ರಥೋತ್ಸವಕ್ಕೆ ಸಿದ್ಧತೆ

ದಾ.ರಾ.ಮಹೇಶ್ ಜ.೧೫ರಿಂದ ೧೮ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು; ಗಿರಿಜನರು ಹೆಚ್ಚಾಗಿ ಭಾಗಿಯಾಗುವ ಜಾತ್ರೆ ವೀರನಹೊಸಹಳ್ಳಿ: ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಹೊಂದಿಕೊಂಡಿರುವ…

1 hour ago

ಜನವರಿ.21ರಿಂದ ಮುಡುಕುತೊರೆ ಜಾತ್ರಾ ಮಹೋತ್ಸವ ಸಂಭ್ರಮ

ಎಂ.ನಾರಾಯಣ ದೇವಾಲಯದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಈ ಬಾರಿಯೂ ರಥೋತ್ಸವ ಇಲ್ಲ  ತಿ.ನರಸೀಪುರ: ಕಾವೇರಿ ನದಿ ದಡದಲ್ಲಿರುವ ತಾಲ್ಲೂಕಿನ ಪ್ರಸಿದ್ಧ ಪುಣ್ಯ…

2 hours ago