ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಅಂಚಿನಲ್ಲಿರುವ ಎಚ್.ಡಿ.ಕೋಟೆ, ಸರಗೂರು ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೀವಹಾನಿಗಳಾಗುತ್ತಿವೆ. ಇತ್ತೀಚೆಗೆ ಎಚ್.ಡಿ. ಕೋಟೆ ಪಟ್ಟಣದ ಸಮೀಪರೆ 3-4 ಹುಲಿಗಳು ಒಟ್ಟಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದರೆ, ಒಂದೇ ತಿಂಗಳಿನಲ್ಲಿ ನಾಲ್ಕು ಚಿರತೆಗಳು ಅರಣ್ಯ ಇಲಾಖೆಯ ಬೋನಿನಲ್ಲಿ ಬಿದ್ದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಇನ್ನು ಸರಗೂರು ಭಾಗದಲ್ಲಂತೂ ಆಗಾಗ್ಗೆ ಕಾಡಾನೆ ಹಾಗೂ ಹುಲಿಗಳ ದಾಳಿ ನಡೆಯುತ್ತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಜತೆಗೆ ಅನೇಕ ರೈತರೂ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿಗೆ ಸರಗೂರಿನ ಹೆಗ್ಗನೂರು ಗ್ರಾಮದಲ್ಲಿಯೂ ನಿರಂತರವಾಗಿ ಹುಲಿಯೊಂದು ದಾಳಿ ನಡೆಸಿ ನಾಲ್ಕೈದು ಜಾನುವಾರುಗಳನ್ನು ಬಲಿಪಡೆದಿತ್ತು. ಇತ್ತ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ವರ್ಷದ ಹಿಂದೆ ರತ್ನಮ್ಮ ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿ ಬಲಿ ಪಡೆದಿತ್ತು. ಈಗ ಅದೇ ಸ್ಥಳದಲ್ಲಿ ಹುಲಿ ಹಸುವೊಂದನ್ನು ಬಲಿ ಪಡೆದಿದೆ. ಇತ್ತೀಚೆಗೆ ಕಾಡಂಚಿನ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಜಮೀನುಗಳಿಗೆ ಹೋಗಲು, ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡಲೂ ಆತಂಕ ಪಡುವಂತಾಗಿದೆ. ಕಾಡುಪ್ರಾಣಿಗಳು ಕಾಣಿಸಿಕೊಂಡಾಗ ಅರಣ್ಯ ಇಲಾಖೆಯವರು ಅವುಗಳನ್ನು ಹಿಡಿಯುವ ಭರವಸೆ ನೀಡುತ್ತಾರಾದರೂ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮವಹಿಸುವುದಿಲ್ಲ. ಆದ್ದರಿಂದ ಆಯಾ ಭಾಗದ ಶಾಸಕರು ಈ ಬಗ್ಗೆ ಗಮನಹರಿಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.
-ಸಂಜಯ್, ಎಚ್.ಡಿ.ಕೋಟೆ ತಾ.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…