Categories: Andolana originals

ಓದುಗರ ಪತ್ರ: ಕಾಡುಪ್ರಾಣಿಗಳ ಹಾವಳಿಗೆ ಕಡಿವಾಣ ಹಾಕಿ

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಅಂಚಿನಲ್ಲಿರುವ ಎಚ್‌.ಡಿ.ಕೋಟೆ, ಸರಗೂರು ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೀವಹಾನಿಗಳಾಗುತ್ತಿವೆ. ಇತ್ತೀಚೆಗೆ ಎಚ್.ಡಿ. ಕೋಟೆ ಪಟ್ಟಣದ ಸಮೀಪರೆ 3-4 ಹುಲಿಗಳು ಒಟ್ಟಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದರೆ, ಒಂದೇ ತಿಂಗಳಿನಲ್ಲಿ ನಾಲ್ಕು ಚಿರತೆಗಳು ಅರಣ್ಯ ಇಲಾಖೆಯ ಬೋನಿನಲ್ಲಿ ಬಿದ್ದಿರುವುದು ಜನರನ್ನು ಭಯಭೀತರನ್ನಾಗಿಸಿದೆ. ಇನ್ನು ಸರಗೂರು ಭಾಗದಲ್ಲಂತೂ ಆಗಾಗ್ಗೆ ಕಾಡಾನೆ ಹಾಗೂ ಹುಲಿಗಳ ದಾಳಿ ನಡೆಯುತ್ತಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯ ಜತೆಗೆ ಅನೇಕ ರೈತರೂ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿಗೆ ಸರಗೂರಿನ ಹೆಗ್ಗನೂರು ಗ್ರಾಮದಲ್ಲಿಯೂ ನಿರಂತರವಾಗಿ ಹುಲಿಯೊಂದು ದಾಳಿ ನಡೆಸಿ ನಾಲ್ಕೈದು ಜಾನುವಾರುಗಳನ್ನು ಬಲಿಪಡೆದಿತ್ತು. ಇತ್ತ ನಂಜನಗೂಡಿನ ಬಳ್ಳೂರು ಹುಂಡಿ ಗ್ರಾಮದಲ್ಲಿ ವರ್ಷದ ಹಿಂದೆ ರತ್ನಮ್ಮ ಎಂಬವರ ಮೇಲೆ ಹುಲಿಯೊಂದು ದಾಳಿ ನಡೆಸಿ ಬಲಿ ಪಡೆದಿತ್ತು. ಈಗ ಅದೇ ಸ್ಥಳದಲ್ಲಿ ಹುಲಿ ಹಸುವೊಂದನ್ನು ಬಲಿ ಪಡೆದಿದೆ. ಇತ್ತೀಚೆಗೆ ಕಾಡಂಚಿನ ತಾಲ್ಲೂಕುಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಜನರು ಜಮೀನುಗಳಿಗೆ ಹೋಗಲು, ರಾತ್ರಿ ವೇಳೆ ರಸ್ತೆಯಲ್ಲಿ ತಿರುಗಾಡಲೂ ಆತಂಕ ಪಡುವಂತಾಗಿದೆ. ಕಾಡುಪ್ರಾಣಿಗಳು ಕಾಣಿಸಿಕೊಂಡಾಗ ಅರಣ್ಯ ಇಲಾಖೆಯವರು ಅವುಗಳನ್ನು ಹಿಡಿಯುವ ಭರವಸೆ ನೀಡುತ್ತಾರಾದರೂ ಕಾಡುಪ್ರಾಣಿಗಳ ಹಾವಳಿಯನ್ನು ತಡೆಗಟ್ಟಲು ಕ್ರಮವಹಿಸುವುದಿಲ್ಲ. ಆದ್ದರಿಂದ ಆಯಾ ಭಾಗದ ಶಾಸಕರು ಈ ಬಗ್ಗೆ ಗಮನಹರಿಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ.
-ಸಂಜಯ್, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

48 mins ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

4 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

4 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

4 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

4 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

4 hours ago