ಓದುಗರ ಪತ್ರ
ನಂಜನಗೂಡಿನಲ್ಲಿ ನಿರ್ಮಾಣವಾಗಿರುವ ಮೈಸೂರು – ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿನ ಚಾಮರಾಜನಗರಕ್ಕೆ ಹೋಗುವ ಬೈಪಾಸ್ ರಸ್ತೆಯ ಮೇಲ್ಸೇತುವೆಗೆ, ವಿ. ಶ್ರೀನಿವಾಸ ಪ್ರಸಾದ್ ಹೆಸರಿಡಬೇಕು ಎಂದು ಅವರ ಅಭಿಮಾನಿಗಳು ಒತ್ತಾಯಿಸಿದರೆ , ಆರ್. ಧ್ರುವನಾರಾಯಣ ಅವರ ಹೆಸರಿಡಬೇಕು ಎಂದು ಅವರ ಅಭಿಮಾನಿಗಳಿಂದ ಒತ್ತಾಯ ಕೇಳಿ ಬಂದಿತ್ತು.
ಆದರೆ ಶಾಸಕ ದರ್ಶನ್ ಧ್ರುವ ನಾರಾಯಣ್ ಅವರು ಕೇಂದ್ರದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್ ಅವರ ಹೆಸರನ್ನು ಮೇಲ್ಸೇತುವೆಗೆ ನಾಮಕರಣ ಮಾಡಿ ಪ್ರಬುದ್ಧತೆಗೆ ಸಾಕ್ಷಿಯಾಗಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಮೈಸೂರಿನ ಕೆಲವು ವೃತ್ತ ಹಾಗೂ ರಸ್ತೆಗಳಿಗೆ ನಾಮಕರಣ ಮಾಡುವ ವಿಚಾರವಾಗಿ ಪರ- ವಿರೋಧ ವ್ಯಕ್ತವಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇಂತಹ ಸಂದರ್ಭಲ್ಲಿ ಶಾಸಕ ದರ್ಶನ್ ಅವರು ಶ್ರೀನಿವಾಸ ಪ್ರಸಾದ್ ಅವರ ಜನಪರ ಸೇವೆಯನ್ನು ಮನಗಂಡು ಮೇಲ್ಸೇತುವೆಗೆ ಅವರ ಹೆಸರನ್ನು ನಾಮಕರಣ ಮಾಡಿರುವುದು ಶ್ಲಾಘನೀಯ.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…