ಓದುಗರ ಪತ್ರ
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ ಶಾಸಕ ದರ್ಶನ್ ಧ್ರುವ ನಾರಾಯಣ ಆಗಮಿಸಿದ್ದರು. ಸಮಾರಂಭದ ಬಳಿಕ ಸಾರ್ವಜನಿಕರ ಅಹವಾಲುಗಳು ಹಾಗೂ ಕುಂದು ಕೊರತೆಗಳನ್ನು ವಿಚಾರಿಸಿ, ಪರಿಹರಿಸುತ್ತಿದ್ದರು. ಅದೇ ಸಮಯದಲ್ಲಿ ನಾನು ಅವರನ್ನು ಭೇಟಿಯಾಗಿ ನಂಜನಗೂಡಿನ ತಾಲ್ಲೂಕಿನ ಪ್ರತಿಷ್ಠಿತ ಸರ್ಕಾರಿ ಆದರ್ಶ ವಿದ್ಯಾಲಯ ಶಾಲೆ ಬಳಿ ರಸ್ತೆ ಉಬ್ಬು ಹಾಗೂ ಬಸ್ ಶೆಲ್ಟರ್ ನಿರ್ಮಿಸುವ ವಿಚಾರ ಸಂಬಂಧ ಮನವರಿಕೆ ಮಾಡಿದೆ.
ವಿಷಯಕ್ಕೆ ಸ್ಪಂದಿಸಿ ಅದರ ಮರುದಿನವೇ ಶಾಲೆಯ ಬಳಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಅಲ್ಲಿ ರಸ್ತೆ ಉಬ್ಬು ಹಾಗೂ ಬಸ್ ಶೆಲ್ಟರ್ ನಿರ್ಮಾಣ ಆಗಲಿರುವ ಮಾಹಿತಿ ಲಭ್ಯವಾಗಿದೆ.
ದರ್ಶನ್ ಮೊದಲ ಬಾರಿಗೆ ಶಾಸಕರಾಗುತಿದ್ದಂತೆ ಕ್ಷೇತ್ರದಲ್ಲಿ ಬಹುತೇಕ ಸಾರ್ವಜನಿಕರ ಅಭಿಪ್ರಾಯ ರಾಜಕೀಯದಲ್ಲಿ ಅನುಭವ ಇಲ್ಲ, ವಯಸ್ಸು ಕೂಡ ಚಿಕ್ಕದು, ಇವರು ಹೇಗೆ ನಿಭಾಯಿಸಬಲ್ಲರು ಎಂಬುದಾಗಿತ್ತು. ಅವರ ಉತ್ಸಾಹ ಕಾರ್ಯ ನಿರ್ವಹಣೆ, ಪರಿಶ್ರಮವನ್ನು ನೋಡುತ್ತಿದ್ದರೆ ಎಲ್ಲವನ್ನೂ ಸುಳ್ಳು ಮಾಡಿ ಜನರ ನಾಡಿ ಮಿಡಿತ, ಕಷ್ಟ ಕಾರ್ಪಣ್ಯಗಳು ಅಭಿವೃದ್ಧಿ ಕಾರ್ಯ, ಕುಂದು ಕೊರತೆ ಸಂಬಂಧಿಸಿದಂತೆ ನಿರಂತರವಾಗಿ ಕೆಲಸ ಕಾರ್ಯಗಳು ಆಗುತ್ತಿವೆ. ಸಾಮಾನ್ಯ ಜನರ ಕೈಗೂ ಸಿಗುವ ಇವರ ಜನಪರಧೋರಣೆ ನಿಜಕ್ಕೂ ಮೆಚ್ಚುವಂತಹದ್ದು.
– ಅನಿಲ್ ಕುಮಾರ್, ನಂಜನಗೂಡು
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…