ಓದುಗರ ಪತ್ರ
ನಾಡಹಬ್ಬ ದಸರಾ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ನಗರದಲ್ಲಿ ೧೩೬ ಕಿ.ಮೀ. ವ್ಯಾಪ್ತಿಯ ರಸ್ತೆಗಳು ಮತ್ತು ೧೧೮ ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದೆ.
ಈ ವಿದ್ಯುತ್ ದೀಪಗಳ ಅಲಂಕಾರ ಮೈಸೂರಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ, ಈ ಸಂಭ್ರಮದಲ್ಲಿ ನಾವು ಸುರಕ್ಷತೆಯ ಬಗ್ಗೆಯೂ ಗಮನಹರಿಸುವುದು ಮುಖ್ಯ. ದೀಪಾಲಂಕಾರದ ಮುಂದೆ ನಿಂತು ಸೆಲ್ಛಿ ತೆಗೆದುಕೊಳ್ಳುವುದು ಸಹಜ. ಆದರೆ, ರಸ್ತೆ ಮಧ್ಯೆ ನಿಂತು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಸೆಲ್ಛಿ ತೆಗೆದುಕೊಳ್ಳುವುದು, ವಿದ್ಯುತ್ ಕಂಬಗಳ ಬಳಿ ಹೋಗಿ ಅವುಗಳನ್ನು ಮುಟ್ಟಿ ಫೋಟೋ ತೆಗೆದುಕೊಳ್ಳುವಾಗ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ.
ಹೀಗಾಗಿ, ದೀಪಾಲಂಕಾರವನ್ನು ದೂರದಿಂದಲೇ ನೋಡುವಂತೆ ಸಾರ್ವಜನಿಕರಿಗೆ ಸಂಬಂಧಪಟ್ಟವರು ಸೂಚನೆ ನೀಡುವುದು ಅಗತ್ಯ.ದೀಪಾಲಂಕಾರವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನಬರುವುದರಿಂದ ನೂಕುನುಗ್ಗಲು ಉಂಟಾಗಬಹುದು. ಆದ್ದರಿಂದ ಸಾರ್ವಜನಿಕರು ಜನಸಂದಣಿಯಲ್ಲಿ ತಮ್ಮ ವಸ್ತುಗಳು, ಮಕ್ಕಳನ್ನು ಜೋಪಾನವಾಗಿ ನೋಡಿಕೊಳ್ಳಬೇಕು. ಪೊಲೀಸ್ ಮತ್ತು ಸೆಸ್ಕ್ ಸಿಬ್ಬಂದಿ ನೀಡುವ ಸಲಹೆ ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…