Andolana originals

ಓದುಗರ ಪತ್ರ: ದಸರಾ ದೀಪಾಲಂಕಾರ: ಮುನ್ನೆಚ್ಚರಿಕೆ ಅಗತ್ಯ

ನಾಡಹಬ್ಬ ದಸರಾ ವಿಧ್ಯುಕ್ತವಾಗಿ ಉದ್ಘಾಟನೆಯಾಗಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ನಗರದಲ್ಲಿ ೧೩೬ ಕಿ.ಮೀ. ವ್ಯಾಪ್ತಿಯ ರಸ್ತೆಗಳು ಮತ್ತು ೧೧೮ ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ ಮಾಡಲಾಗಿದೆ.

ಈ ವಿದ್ಯುತ್ ದೀಪಗಳ ಅಲಂಕಾರ ಮೈಸೂರಿನ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ, ಈ ಸಂಭ್ರಮದಲ್ಲಿ ನಾವು ಸುರಕ್ಷತೆಯ ಬಗ್ಗೆಯೂ ಗಮನಹರಿಸುವುದು ಮುಖ್ಯ. ದೀಪಾಲಂಕಾರದ ಮುಂದೆ ನಿಂತು ಸೆಲ್ಛಿ ತೆಗೆದುಕೊಳ್ಳುವುದು ಸಹಜ. ಆದರೆ, ರಸ್ತೆ ಮಧ್ಯೆ ನಿಂತು, ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಸೆಲ್ಛಿ ತೆಗೆದುಕೊಳ್ಳುವುದು, ವಿದ್ಯುತ್ ಕಂಬಗಳ ಬಳಿ ಹೋಗಿ ಅವುಗಳನ್ನು ಮುಟ್ಟಿ ಫೋಟೋ ತೆಗೆದುಕೊಳ್ಳುವಾಗ ಅನಾಹುತಗಳು ಸಂಭವಿಸುವ ಸಾಧ್ಯತೆಗಳಿರುತ್ತವೆ.

ಹೀಗಾಗಿ, ದೀಪಾಲಂಕಾರವನ್ನು ದೂರದಿಂದಲೇ ನೋಡುವಂತೆ ಸಾರ್ವಜನಿಕರಿಗೆ ಸಂಬಂಧಪಟ್ಟವರು ಸೂಚನೆ ನೀಡುವುದು ಅಗತ್ಯ.ದೀಪಾಲಂಕಾರವನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಜನಬರುವುದರಿಂದ ನೂಕುನುಗ್ಗಲು ಉಂಟಾಗಬಹುದು. ಆದ್ದರಿಂದ ಸಾರ್ವಜನಿಕರು ಜನಸಂದಣಿಯಲ್ಲಿ ತಮ್ಮ ವಸ್ತುಗಳು, ಮಕ್ಕಳನ್ನು ಜೋಪಾನವಾಗಿ ನೋಡಿಕೊಳ್ಳಬೇಕು. ಪೊಲೀಸ್ ಮತ್ತು ಸೆಸ್ಕ್ ಸಿಬ್ಬಂದಿ ನೀಡುವ ಸಲಹೆ ಮತ್ತು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

 -ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

4 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

5 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

13 hours ago