Andolana originals

ಓದುಗರ ಪತ್ರ: ದಸರಾ ಕ್ರೀಡೆಗಳ ಆಯೋಜನೆ ವ್ಯವಸ್ಥಿತವಾಗಿರಲಿ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್’ ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ
ದಸರಾ ಕ್ರೀಡಾಕೂಟ ಮಟ್ಟದ ದಸರಾ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಇಲ್ಲಿ ವಿಜೇತರಾದವರು ವಿಭಾಗೀಯ ಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಬೇಕಿತ್ತು. ಆದರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ಜಿಲ್ಲಾ ಮಟ್ಟದ ಕ್ರೀಡಾಕೂಟ, ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ವಿಭಾಗೀಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜನೆ ಮಾಡಿದರೆ ಸತತವಾಗಿ ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಭಾಗವಹಿಸುವುದಾದರೂ ಹೇಗೆ? ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದೆ.

ದಸರಾಗೂ ಒಂದು ತಿಂಗಳ ಮುನ್ನವೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಮುಗಿಸಿಕೊಂಡರೆ ಕ್ರೀಡಾಪಟುಗಳು ಕೊಂಚ ಬ್ರೇಕ್ ಪಡೆದು ವಿಭಾಗೀಯ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ತಯಾರಾಗಲು ಸಾಧ್ಯವಾಗುತ್ತದೆ. ಸೆ.27ಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿಸಿ ಸೆ.28ಕ್ಕೆ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸಿ ಭಾಗದಹಿಸಬೇಕು ಎಂದರ ಕ್ರೀಡಾಪಟುಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಮುಂದಿನ ಬಾರಿಯಾದರೂ ದಸರಾ ಕ್ರೀಡಾಕೂಟಗಳ ಬಗ್ಗೆ ಸಂಬಂಧಪಟ್ಟ ಇಲಾ ಖೆಯು ಆಸಕ್ತಿವಹಿಸಿ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತಾಗಲಿ.
-ಪ್ರಶಾಂತ್, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

9 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

9 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

9 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

9 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

10 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

10 hours ago