Andolana originals

ಓದುಗರ ಪತ್ರ: ದಸರಾ ಕ್ರೀಡೆಗಳ ಆಯೋಜನೆ ವ್ಯವಸ್ಥಿತವಾಗಿರಲಿ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್’ ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ
ದಸರಾ ಕ್ರೀಡಾಕೂಟ ಮಟ್ಟದ ದಸರಾ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಇಲ್ಲಿ ವಿಜೇತರಾದವರು ವಿಭಾಗೀಯ ಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಬೇಕಿತ್ತು. ಆದರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ಜಿಲ್ಲಾ ಮಟ್ಟದ ಕ್ರೀಡಾಕೂಟ, ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ವಿಭಾಗೀಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜನೆ ಮಾಡಿದರೆ ಸತತವಾಗಿ ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಭಾಗವಹಿಸುವುದಾದರೂ ಹೇಗೆ? ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದೆ.

ದಸರಾಗೂ ಒಂದು ತಿಂಗಳ ಮುನ್ನವೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಮುಗಿಸಿಕೊಂಡರೆ ಕ್ರೀಡಾಪಟುಗಳು ಕೊಂಚ ಬ್ರೇಕ್ ಪಡೆದು ವಿಭಾಗೀಯ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ತಯಾರಾಗಲು ಸಾಧ್ಯವಾಗುತ್ತದೆ. ಸೆ.27ಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿಸಿ ಸೆ.28ಕ್ಕೆ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸಿ ಭಾಗದಹಿಸಬೇಕು ಎಂದರ ಕ್ರೀಡಾಪಟುಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಮುಂದಿನ ಬಾರಿಯಾದರೂ ದಸರಾ ಕ್ರೀಡಾಕೂಟಗಳ ಬಗ್ಗೆ ಸಂಬಂಧಪಟ್ಟ ಇಲಾ ಖೆಯು ಆಸಕ್ತಿವಹಿಸಿ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತಾಗಲಿ.
-ಪ್ರಶಾಂತ್, ಎಚ್.ಡಿ.ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago