ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್’ ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ
ದಸರಾ ಕ್ರೀಡಾಕೂಟ ಮಟ್ಟದ ದಸರಾ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಇಲ್ಲಿ ವಿಜೇತರಾದವರು ವಿಭಾಗೀಯ ಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಬೇಕಿತ್ತು. ಆದರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ಜಿಲ್ಲಾ ಮಟ್ಟದ ಕ್ರೀಡಾಕೂಟ, ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ವಿಭಾಗೀಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜನೆ ಮಾಡಿದರೆ ಸತತವಾಗಿ ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಭಾಗವಹಿಸುವುದಾದರೂ ಹೇಗೆ? ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದೆ.
ದಸರಾಗೂ ಒಂದು ತಿಂಗಳ ಮುನ್ನವೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಮುಗಿಸಿಕೊಂಡರೆ ಕ್ರೀಡಾಪಟುಗಳು ಕೊಂಚ ಬ್ರೇಕ್ ಪಡೆದು ವಿಭಾಗೀಯ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ತಯಾರಾಗಲು ಸಾಧ್ಯವಾಗುತ್ತದೆ. ಸೆ.27ಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿಸಿ ಸೆ.28ಕ್ಕೆ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸಿ ಭಾಗದಹಿಸಬೇಕು ಎಂದರ ಕ್ರೀಡಾಪಟುಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಮುಂದಿನ ಬಾರಿಯಾದರೂ ದಸರಾ ಕ್ರೀಡಾಕೂಟಗಳ ಬಗ್ಗೆ ಸಂಬಂಧಪಟ್ಟ ಇಲಾ ಖೆಯು ಆಸಕ್ತಿವಹಿಸಿ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತಾಗಲಿ.
-ಪ್ರಶಾಂತ್, ಎಚ್.ಡಿ.ಕೋಟೆ ತಾ
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…