ಓದುಗರ ಪತ್ರ
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್’ ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ
ದಸರಾ ಕ್ರೀಡಾಕೂಟ ಮಟ್ಟದ ದಸರಾ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಇಲ್ಲಿ ವಿಜೇತರಾದವರು ವಿಭಾಗೀಯ ಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಬೇಕಿತ್ತು. ಆದರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ಜಿಲ್ಲಾ ಮಟ್ಟದ ಕ್ರೀಡಾಕೂಟ, ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿದ ಮರುದಿನವೇ ವಿಭಾಗೀಯ ಮಟ್ಟದ ಕ್ರೀಡಾ ಕೂಟವನ್ನು ಆಯೋಜನೆ ಮಾಡಿದರೆ ಸತತವಾಗಿ ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಭಾಗವಹಿಸುವುದಾದರೂ ಹೇಗೆ? ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ದಸರಾ ಕ್ರೀಡಾಕೂಟವನ್ನು ಆಯೋಜನೆ ಮಾಡುತ್ತಿದೆ.
ದಸರಾಗೂ ಒಂದು ತಿಂಗಳ ಮುನ್ನವೇ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟಗಳನ್ನು ಮುಗಿಸಿಕೊಂಡರೆ ಕ್ರೀಡಾಪಟುಗಳು ಕೊಂಚ ಬ್ರೇಕ್ ಪಡೆದು ವಿಭಾಗೀಯ ಹಾಗೂ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ತಯಾರಾಗಲು ಸಾಧ್ಯವಾಗುತ್ತದೆ. ಸೆ.27ಕ್ಕೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಮುಗಿಸಿ ಸೆ.28ಕ್ಕೆ ವಿಭಾಗೀಯ ಮಟ್ಟದ ಕ್ರೀಡಾಕೂಟಕ್ಕಾಗಿ ದೂರದ ಸ್ಥಳಗಳಿಗೆ ಪ್ರಯಾಣಿಸಿ ಭಾಗದಹಿಸಬೇಕು ಎಂದರ ಕ್ರೀಡಾಪಟುಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಮುಂದಿನ ಬಾರಿಯಾದರೂ ದಸರಾ ಕ್ರೀಡಾಕೂಟಗಳ ಬಗ್ಗೆ ಸಂಬಂಧಪಟ್ಟ ಇಲಾ ಖೆಯು ಆಸಕ್ತಿವಹಿಸಿ ವ್ಯವಸ್ಥಿತವಾಗಿ ಆಯೋಜನೆ ಮಾಡುವಂತಾಗಲಿ.
-ಪ್ರಶಾಂತ್, ಎಚ್.ಡಿ.ಕೋಟೆ ತಾ
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…