Mysore
22
overcast clouds

Social Media

ಬುಧವಾರ, 22 ಜುಲೈ 2026
Light
Dark

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಓದುಗರ ಪತ್ರ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ, ಹಾವೇರಿ, ಮೈಸೂರು, ಶಿವಮೊಗ್ಗ, ರಾಯಚೂರು ಹಾಗೂ ಚಿಕ್ಕಮಗಳೂರು ಜಿಗಳಲ್ಲಿ ಭೀಕರ ಬರ ಪರಿಸ್ಥಿತಿ ತಲೆದೋರಿದೆ. ಕೃಷಿ ಇಲಾಖೆಯ ಪ್ರಕಾರ ಶೇ.೭೦ ಕ್ಕೂ ಹೆಚ್ಚು ಬಿತ್ತನೆ ಪ್ರದೇಶಗಳು ಸಂಪೂರ್ಣ ಒಣಗಿಹೋಗಿವೆ.

ಸರ್ಕಾರವು ಎಸಿ ಕೊಠಡಿಗಳಲ್ಲಿ ಸಭೆ ನಡೆಸಿ ಅಂಕಿ-ಅಂಶಗಳ ಆಟ ಆಡುತ್ತಿದೆಯೇ ಹೊರತು, ನೆಲದ ಮೇಲಿನ ಬವಣೆ ಆಲಿಸುತ್ತಿಲ್ಲ. ಕುಡಿಯುವ ನೀರಿಲ್ಲದೆ ಗ್ರಾಮಗಳು ಖಾಲಿಯಾಗುತ್ತಿದ್ದು, ರೈತರು ಬದುಕಿಗಾಗಿ ಗುಳೆ ಹೋಗುತ್ತಿದ್ದಾರೆ. ಪರಿಹಾರ ಧನ ಬಿಡುಗಡೆಯಲ್ಲಿ ತಾರತಮ್ಯ ಮತ್ತು ವಿಳಂಬ ಧೋರಣೆ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿಹಿಡಿಯುವಂತಿದೆ.

ತಕ್ಷಣವೇ ಈ ಜಿಗಳನ್ನು ಬರಪೀಡಿತ ಎಂದು ಘೋಷಿಸಿ, ಕನಿಷ್ಠ ಬೆಂಬಲ ಬೆಲೆ ಹಾಗೂ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ರೈತರ ಬವಣೆಗಳನ್ನು ಅರಿತುಕೊಂಡು ಅವರ ಕಷ್ಟಗಳಿಗೆ ಸ್ಪಂದಿಸಬೇಕು.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

 

Tags:
error: Content is protected !!