ಓದುಗರ ಪತ್ರ
ಮೈಸೂರು ದಸರಾ ಅಂಗವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ಆದರೆ ಕೆಲವು ಹಳೆಯ ಬಡಾವಣೆಗಳಿಗೆ ಪ್ರತಿ ವರ್ಷವೂ ದಸರಾ ದೀಪಾಲಂಕಾರ ಮಾಡುವುದಿಲ್ಲ.
ಮೈಸೂರಿನ ಅರಸರಿಗೂ ನಗರದ ಕೆಲವು ಹಳೆಯ ಬಡಾವಣೆಗಳಿಗೂ ಅವಿನಾಭಾವ ಸಂಬಂಧ ಇತ್ತು. ಈಗಲೂ ಈ ಬಡಾವಣೆಗಳ ಜನರು ರಾಜವಂಶಸ್ಥರನ್ನು ಪೂಜನೀಯ ಭಾವನೆಯಿಂದ ಸ್ಮರಿಸುತ್ತಾರೆ. ದಸರಾವನ್ನು ದೊಡ್ಡ ಹಬ್ಬವಾಗಿ ಆಚರಿಸುವ ಈ ಬಡಾವಣೆಗಳ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡದೇ ಇರುವುದು ಬೇಸರದ ಸಂಗತಿ. ಈ ಬಾರಿಯಾದರೂ ಮೈಸೂರಿನ ಹಳೇ ಬಡಾವಣೆಗಳಿಗೂ ದೀಪಾ ಲಂಕಾರ ಮಾಡುವ ಮೂಲಕ ಸ್ಥಳೀಯರು ಮತ್ತು ದಸರಾ ಪರಂಪರೆಯ ಅನುಬಂಧವನ್ನು ಹೆಚ್ಚಿಸಬೇಕಾಗಿದೆ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…