ಎಚ್.ಡಿ.ಕೋಟೆ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆ.ಜಿ.ಹಳ್ಳಿ ಗ್ರಾಮದ ಬಸ್ ತಂಗುದಾಣವು ಶಿಥಿಲಾವಸ್ಥೆಗೆ ತಲುಪಿದ್ದು, ಕುಸಿದು ಬೀಳುವ ಹಂತದಲ್ಲಿದೆ.
ಈ ಬಸ್ ತಂಗುದಾಣವನ್ನು ನಿರ್ಮಿಸಿ
ಸುಮಾರು 20 ವರ್ಷಗಳೇ ಕಳೆದಿವೆ. ಇಷ್ಟು ಹಳೆಯದಾದ ತಂಗುದಾಣವನ್ನು ಸರಿಯಾಗಿ ನಿರ್ವಹಿಸದ ಪರಿಣಾಮ ಇದು ಶಿಥಿಲಗೊಂಡಿದ್ದು, ಇಂದೋ ನಾಳೆಯೋ ಬೀಳುವ ಹಂತ ತಲುಪಿದೆ. ಕೆಲ ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಯಿಂದಾಗಿ ಈ ತಂಗುದಾಣ ಮತ್ತಷ್ಟು ಹದಗೆಟ್ಟಿದ್ದು, ಜನರು ತಂಗುದಾಣದೊಳಗೆ ಆಶ್ರಯ ಪಡೆಯಲು ಹೆದರುವಂತಾಗಿದೆ. ಪ್ರತಿನಿತ್ಯ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಇದೇ ತಂಗುದಾಣದಲ್ಲಿ ನಿಂತು ಬಸ್ ಹತ್ತಬೇಕು. ಈ ವೇಳೆ ಏನಾದರೂ ಅನಾಹುತ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು ಈ ತಂಗುದಾಣವನ್ನು ನೆಲಸಮ ಮಾಡಿ ನೂತನ ಬಸ್ ತಂಗುದಾಣವನ್ನು ನಿರ್ಮಿಸಬೇಕಿದೆ.
-ಕೆ.ಎಸ್.ಸುರೇಶ್, ಕೆ.ಜಿ.ಹಳ್ಳಿ, ಎಚ್.ಡಿ.ಕೋಟೆ ತಾ.
ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…