Andolana originals

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ ಮಾರಕವಾಗಿದೆ.

ಮಂಡಳಿಯ ಶೇ.೭೦ ಕ್ಕೂ ಹೆಚ್ಚು ತಾಂತ್ರಿಕ ಹುದ್ದೆಗಳು ಖಾಲಿಯಿರುವ ಬಗ್ಗೆ ವರದಿಗಳಿವೆ. ದಕ್ಷ ನಾಯಕತ್ವದ ಕೊರತೆಯಿಂದಾಗಿ ರಾಜ್ಯದ ಶೇ. ೮೫ ರಷ್ಟು ಕೆರೆಗಳು ಹೆಚ್ಚಿನ ರೀತಿಯಲ್ಲಿ ಕಲುಷಿತಗೊಂಡಿವೆ. ಮಾಲಿನ್ಯ ನಿಯಂತ್ರಣ ಮಂಡಳಿಗಳು ಕೇವಲ ಪುನರ್ವಸತಿ ಕೇಂದ್ರಗಳಲ್ಲ. ಅವು ವೈಜ್ಞಾನಿಕವಾಗಿ ಆಡಳಿತ ನಡೆಸಬೇಕಾದ ಶಾಸನಬದ್ಧ ಸಂಸ್ಥೆಗಳು. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಉಚ್ಚ ನ್ಯಾಯಾಲಯಗಳು ತಜ್ಞರ ನೇಮಕಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದರೂ ಸರ್ಕಾರಗಳು ಕಾನೂನು ತಿದ್ದುಪಡಿಗಳ ಮೂಲಕ ರಾಜಕೀಯ ‘ಆಪ್ತ’ರನ್ನು ಕೂರಿಸುತ್ತಿರುವುದು ಖಂಡನೀಯ.

ಈ ಸ್ವಜನಪಕ್ಷಪಾತವು ಕೈಗಾರಿಕಾ ತ್ಯಾಜ್ಯ ಮತ್ತು ನದಿ ಮಾಲಿನ್ಯದ ವಿರುದ್ಧದ ಕಠಿಣ ಕ್ರಮಗಳನ್ನು ಸಂಪೂರ್ಣವಾಗಿ ಹಳಿ ತಪ್ಪಿಸಿದೆ. ಕೆಎಸ್ ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ ಅರ್ಹ ಪರಿಸರ ವಿeನಿಗಳನ್ನು ನೇಮಿಸದಿದ್ದರೆ ಸಾರ್ವಜನಿಕರ ಆರೋಗ್ಯ ಮತ್ತು ಪರಿಸರ ವ್ಯವಸ್ಥೆ ಕುಸಿಯುವುದು ನಿಶ್ಚಿತ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

11 mins ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

16 mins ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

19 mins ago

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

10 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

10 hours ago