ಓದುಗರ ಪತ್ರ
ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಿಗೆ ಸಂಬಂಧಿಸಿದ ಭೂಸ್ವಾಧೀನ ಅಧಿಸೂಚನೆಯನ್ನು ಕೈಬಿಡಲು ಸರ್ಕಾರ ತೀರ್ಮಾನಿಸಿದೆ, ಆದರೆ ಜಮೀನು ನೀಡಲು ತಾವಾಗೇ ಒಪ್ಪುವ ರೈತರಿಗೆ ಹೆಚ್ಚಿನ ದರ ನೀಡುವುದಲ್ಲದೆ ಅಭಿವೃದ್ಧಿಪಡಿಸಿದ ಜಮೀನನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಕೆಐಎಡಿಬಿಯಿಂದ ೧,೭೭೭ ಎಕರೆ ಫಲವತ್ತಾದ ಜಮೀನನ್ನು ಭೂ ಸ್ವಾಧೀನ ಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. ಇದನ್ನು ವಿರೋಧಿಸಿ ರೈತರು ೧,೨೦೦ ದಿನಗಳಿಂದ ಹೋರಾಟ ನಡೆಸುತ್ತಿದ್ದರು. ಕೊನೆಗೂ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಭೂ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿರುವುದು ಸ್ವಾಗತಾರ್ಹ. ದೇವನಹಳ್ಳಿ ತಾಲ್ಲೂಕಿನ ರೈತರು, ರೈತ ಸಂಘಟನೆಗಳು ಹಾಗೂ ಈ ಹೋರಾಟದಲ್ಲಿ ಪರೋಕ್ಷವಾಗಿ ಹಾಗೂ ಪ್ರತ್ಯಕ್ಷವಾಗಿ ಬೆಂಬಲ ನೀಡಿದ ಪ್ರತಿಯೊಬ್ಬರೂ ಅಭಿನಂದನಾರ್ಹರು.
– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…