Andolana originals

ಓದುಗರ ಪತ್ರ| ಹಾಡಿ ರಸ್ತೆ ಅಭಿವೃದ್ಧಿಪಡಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಿಂದ ಹನುಮಂತ ನಗರ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೆಸರುಮಯ ವಾಗಿದ್ದು, ಜನರು ಸಂಚಾರ ಮಾಡಲು ಪರದಾಡುವಂತಾಗಿದೆ.

ಹನುಮಂತ ನಗರ ಗಿರಿಜನ ಹಾಡಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಆದಿವಾಸಿ ಬುಡಕಟ್ಟು ಸಮುದಾಯದ ಕುಟುಂಬಗಳು ವಾಸವಾಗಿದ್ದು, ಈ ಹಾಡಿಗೆ ಇದೊಂದೇ ಸಂಪರ್ಕ ರಸ್ತೆಯಾಗಿದೆ. ಆದರೆ ಈ ರಸ್ತೆಯೂ ಸಂಪೂರ್ಣ ಮಣ್ಣಿನ ರಸ್ತೆಯಾಗಿದ್ದು, ಮಳೆಗಾಲ ಬಂತೂ ಎಂದರೆ ಈ ರಸ್ತೆಯಲ್ಲಿ ಸಂಚರಿಸುವುದೇ ಸಾಹಸಮಯ ಕೆಲಸವಾಗಿದೆ. ಸದ್ಯ ಈಗ ಮಳೆಗಾಲವಾಗಿದ್ದು, ರಸ್ತೆ ಕೆಸರಿನ ಗದ್ದೆಯಂತಾಗಿದೆ. ಇಂತಹ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳು ಜಾರಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.

ಈ ಹಿಂದೆ ಶಾಸಕ ಅನಿಲ್ ಚಿಕ್ಕಮಾದುರವರು ಇಲ್ಲಿಗೆ ಭೇಟಿ ನೀಡಿದ್ದಾಗ ರಸ್ತೆ ಅಭಿವೃದ್ಧಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು. ಅವರು ಈ ಬಾರಿಯಾದರೂ ಭರವಸೆಯಂತೆ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂಬುದು ಇಲ್ಲಿನ ಜನರ ಬೇಡಿಕೆಯಾಗಿದೆ.

-ಕೆ.ಎಸ್.ಹರೀಶ್‌ ಗೌಡ, ಕೆ.ಎಡತೊರೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಗುರುಪುರದ ಬಳಿ ಮತ್ತೆ ಹುಲಿ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಹುಣಸೂರು : ತಾಲ್ಲೂಕಿನ ಗುರುಪುರದ ಟಿಬೆಟ್ ನಿರಾಶ್ರಿತರ ಕೇಂದ್ರದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಾಗರಹೊಳೆ ರಾಷ್ಟ್ರೀಯ…

16 mins ago

ಜಗತ್ತಿಗೆ ಸ್ಪರ್ಧೆ ನೀಡುತ್ತಿದ್ದ ಬೆಂಗಳೂರಿನ ಮೂಲಸೌಕರ್ಯ ಹಾಳಾಗಿದೆ : ಎಚ್‌ಡಿಕೆ

ಬೆಂಗಳೂರು : ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ…

18 mins ago

ಮೈಸೂರು | ಹೊಸ ವರ್ಷದ ಸಂಭ್ರಮಾಚರಣೆಗ ಸಿದ್ದವಾಗ್ತಿದೆ 2 ಲಕ್ಷ ಲಡ್ಡು.!

ಯೋಗ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಡ್ಡುಗಳ ವಿತರಣೆ ಮೈಸೂರು : ನೂತನ ವರ್ಷವನ್ನು ಸ್ವಾಗತಿಸಲು ಸಾಂಸ್ಕೃತಿಕ ನಗರಿ ಮೈಸೂರು…

57 mins ago

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ…

1 hour ago

ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹುಬ್ಬಳ್ಳಿ : ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮೇಲ್ಜಾತಿ ಗರ್ಭಿಣಿ ಪುತ್ರಿ ಮಾನ್ಯಳನ್ನು ತಂದೆಯೇ ಕೊಚ್ಚಿ ಕೊಂದಿದ್ದಾನೆ. ಈ ಮರ್ಯಾದೆ…

2 hours ago

ಸ್ಥಳೀಯವಾಗಿ ಬಿಜೆಪಿಯೊಂದಿಗೆ ಮೈತ್ರಿ ಹೊಂದಾಣಿಕೆ ಕಷ್ಟ : ಎಚ್‌ಡಿಡಿ

ಬೆಂಗಳೂರು : ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುಂದುವರೆಯಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊಂದಾಣಿಕೆ ಕಷ್ಟವಾಗುತ್ತದೆ ಎಂದು ಮಾಜಿ…

2 hours ago