ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಿಂದ ಹನುಮಂತ ನಗರ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೆಸರುಮಯ ವಾಗಿದ್ದು, ಜನರು ಸಂಚಾರ ಮಾಡಲು ಪರದಾಡುವಂತಾಗಿದೆ.
ಹನುಮಂತ ನಗರ ಗಿರಿಜನ ಹಾಡಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಆದಿವಾಸಿ ಬುಡಕಟ್ಟು ಸಮುದಾಯದ ಕುಟುಂಬಗಳು ವಾಸವಾಗಿದ್ದು, ಈ ಹಾಡಿಗೆ ಇದೊಂದೇ ಸಂಪರ್ಕ ರಸ್ತೆಯಾಗಿದೆ. ಆದರೆ ಈ ರಸ್ತೆಯೂ ಸಂಪೂರ್ಣ ಮಣ್ಣಿನ ರಸ್ತೆಯಾಗಿದ್ದು, ಮಳೆಗಾಲ ಬಂತೂ ಎಂದರೆ ಈ ರಸ್ತೆಯಲ್ಲಿ ಸಂಚರಿಸುವುದೇ ಸಾಹಸಮಯ ಕೆಲಸವಾಗಿದೆ. ಸದ್ಯ ಈಗ ಮಳೆಗಾಲವಾಗಿದ್ದು, ರಸ್ತೆ ಕೆಸರಿನ ಗದ್ದೆಯಂತಾಗಿದೆ. ಇಂತಹ ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಪಾದಚಾರಿಗಳು ಜಾರಿ ಬಿದ್ದು ಗಾಯಗೊಂಡಿರುವ ಉದಾಹರಣೆಗಳಿವೆ.
ಈ ಹಿಂದೆ ಶಾಸಕ ಅನಿಲ್ ಚಿಕ್ಕಮಾದುರವರು ಇಲ್ಲಿಗೆ ಭೇಟಿ ನೀಡಿದ್ದಾಗ ರಸ್ತೆ ಅಭಿವೃದ್ಧಿ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು. ಅವರು ಈ ಬಾರಿಯಾದರೂ ಭರವಸೆಯಂತೆ ರಸ್ತೆ ದುರಸ್ತಿ ಮಾಡಿಕೊಡಬೇಕು ಎಂಬುದು ಇಲ್ಲಿನ ಜನರ ಬೇಡಿಕೆಯಾಗಿದೆ.
-ಕೆ.ಎಸ್.ಹರೀಶ್ ಗೌಡ, ಕೆ.ಎಡತೊರೆ, ಎಚ್.ಡಿ.ಕೋಟೆ ತಾ.
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…
ಅಣ್ಣೂರು ಸತೀಶ್ ೩೦ ಹಾಸಿಗೆಯ ಆಸ್ಪತ್ರೆಯಲ್ಲಿ ಖಾಯಂ ವೈದ್ಯರಿಲ್ಲ; ತುರ್ತು ಚಿಕಿತ್ಸೆಯೂ ಲಭ್ಯವಿಲ್ಲ ಭಾರತೀನಗರ: ಸುಮಾರು ನೂರಕ್ಕೂ ಹೆಚ್ಚು ಗ್ರಾಮಗಳ…
ಕೃಷ್ಣ ಸಿದ್ದಾಪುರ ಸ್ಥಳಾಂತರಿಸಿದ್ದ ಪುಂಡಾನೆ ಪುನಃ ಕೊಡಗಿನಲ್ಲಿ ಸಂಚಾರ: ನರಹಂತಕ ಆನೆಯನ್ನು ಸೆರೆ ಹಿಡಿದು ಪಳಗಿಸುವಂತೆ ಗ್ರಾಮಸ್ಥರ ಆಗ್ರ ಸಿದ್ದಾಪುರ:…