ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್ ಅವರು ನಿರ್ಮಾಣ ಮಾಡಿದ್ದರು. ಆದರೆ ಇಂದು ಈ ಸಮುದಾಯ ಭವನವು ಬಳಕೆಯಾಗದೆ ಪಾಳುಬಿದ್ದಿದ್ದು, ಗಿಡ ಗಂಟಿಗಳು ಬೆಳೆದು ವಿಷ ಜಂತುಗಳ ಆವಾಸಸ್ಥಾನವಾಗಿದೆ.
ಸಂಬಂಧಪಟ್ಟ ಶಾಸಕರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿಗಳು ಕೂಡಲೇ ಈ ಅಂಬೇಡ್ಕರ್ ಸಮುದಾಯ ಭವನವನ್ನು ದುರಸ್ತಿ ಮಾಡಿಸಿ ಗ್ರಾಮಸ್ಥರು ಸದ್ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು





