ಓದುಗರ ಪತ್ರ
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನೂರಾರು ಓದುಗರು ಇಲ್ಲಿಗೆ ಬಂದು ಅಭ್ಯಾಸ ಮಾಡುತ್ತಾರೆ. ಮೈಸೂರಿನ ಪೀಪಲ್ಸ್ ಪಾರ್ಕ್ ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಹೊರತುಪಡಿಸಿದರೆ, ಅತಿ ಹೆಚ್ಚಿನ ಓದುಗರನ್ನು ಹೊಂದಿರುವ ಗ್ರಂಥಾಲಯ ಇದಾಗಿದೆ.
ಆದರೆ ಇಲ್ಲಿ ಸ್ಥಳದ ಅಭಾವದಿಂದಾಗಿ ಹಿರಿಯ ನಾಗರಿಕರು ಇಕ್ಕಟ್ಟಿನಲ್ಲಿ, ನಿಂತುಕೊಂಡೇ ದಿನ ಪತ್ರಿಕೆಗಳನ್ನು ಓದುವಂತಾಗಿದೆ. ಈ ಗ್ರಂಥಾಲಯದ ಅರ್ಧ ಭಾಗವು ವಿದ್ಯಾರ್ಥಿಗಳು ಓದಲು ಮೀಸಲಾಗಿದೆ. ಇಲ್ಲಿ ಸ್ಥಳದ ಅಭಾವಿರುವುದರಿಂದ ಈ ಗ್ರಂಥಾಲಯದ ಮೇಲೆ ಮೊದಲ ಮಹಡಿಯನ್ನು ನಿರ್ಮಾಣ ಮಾಡಿ, ಅಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು ಅನುಕೂಲ ಮಾಡಿಕೊಡಬೇಕು ಹಾಗೂ ಈಗ ಗ್ರಂಥಾಲಯದ ಒಳ ಭಾಗದಲ್ಲಿರುವ ಶೌಚಾಲಯವನ್ನು ಸಕಾಲಕ್ಕೆ ಸ್ವಚ್ಛಗೊಳಿಸದೇ ಇರುವುದರಿಂದ ಓದುಗರು ದುರ್ವಾಸನೆಯಿಂದ ಬಳಲುವಂತಾಗಿದೆ. ಸಂಬಂಧಪಟ್ಟವರು ಕೂಡಲೇ ಶೌಚಾಲಯವನ್ನು ಗ್ರಂಥಾಲಯದ ಹೊರಭಾಗದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. ಹೊರಗೆ ಸಾಕಷ್ಟು ಜಾಗ ಇರುವುದರಿಂದ, ಗ್ರಂಥಾಲಯದ ಹೊರ ಭಾಗಕ್ಕೆ ಶೌಚಾಲಯವನ್ನು, ಸ್ಥಳಾಂತರ ಮಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…
ಮಂಡ್ಯ : ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆ.1 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯ ಪ್ರಯುಕ್ತ ಹೆಚ್ಚು ಸಾರ್ವಜನಿಕರು…
ಬೆಂಗಳೂರು : ರಾಜ್ಯದಲ್ಲಿ ಸುಲಲಿತ ವ್ಯವಹಾರಕ್ಕೆ ಅನುವು ಮಾಡಿಕೊಡುವ ಉದ್ದೇಶದಿಂದ ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಅಗತ್ಯ ಇರುವ ಭೂಮಿಯ ಸ್ವಯಂ…
ಮೈಸೂರು : ಇಲ್ಲಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಜ.25 ರಂದು ಬೆಳಗಿನ ಜಾವ 5.30ಕ್ಕೆ 108 ಸಾಮೂಹಿಕ ಸೂರ್ಯ ನಮಸ್ಕಾರ…
ಬೆಂಗಳೂರು : ರಥಸಪ್ತಮಿಯ ನಂತರ ಬಿಸಿಲು ಹೆಚ್ಚಾಗಿ ಕಾಡ್ಗಿಚ್ಚಿನ ಅಪಾಯವೂ ಹೆಚ್ಚುವ ಕಾರಣ ಎಲ್ಲ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು…