ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ ತಾಣವಾಗಿದೆ. ಇದು ಮೈಸೂರಿನ ಅತಿ ಎತ್ತರದ ಬೆಟ್ಟಗಳಲ್ಲಿ ಒಂದಾಗಿದ್ದು, ನೈಸರ್ಗಿಕ ಸೌಂದರ್ಯದಿಂದ ಚಾರಣಕ್ಕೆ ಹೆಸರುವಾಸಿಯಾಗಿದೆ. ಈ ಅದ್ಭುತ ತಾಣದಲ್ಲಿ ಕುಡಿಯುವ ನೀರು, ಶೌಚಾಲಯ ಮೊದಲಾದ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಿದೆ. ಇನ್ನಾದರೂ ಸಂಬಂಧಪಟ್ಟವರು ಈ ಸ್ಥಳವನ್ನು ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯ ಕಲ್ಪಿಸುವುದು ಅಗತ್ಯವಾಗಿದೆ.
-ಡಾ. ಎಚ್.ಕೆ.ವಿಜಯಕುಮಾರ, ಬೆಂಗಳೂರು





