ಓದುಗರ ಪತ್ರ
ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪದ ಗುಡುಮಾನಹಳ್ಳಿ ಕೆರೆಯ ಏರಿಯ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಕೆರೆ ಸುಮಾರು 300-400 ಎಕರೆ ಕೃಷಿ ಭೂಮಿಗೆ ನೀರು ಪೂರೈಕ ಮಾಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಭತ್ತ, ಜೋಳ, ಕಬ್ಬು, ಶುಂಠಿ ಹಾಗೂ ಇತರೆ ಬೆಳೆಗಳನ್ನು ಕಟಾವು ಮಾಡಿದ ನಂತರ ಇದೇ ಮಾರ್ಗವಾಗಿ ಮಾರುಕಟ್ಟೆಗಳಿಗೆ ರವಾನೆ ಮಾಡಬೇಕು,
ಅಲ್ಲದೆ ಈ ರಸ್ತೆ ಮಾಲಾರ ಕಾಲೋನಿ, ಮಂಡ್ಯ ಶೆಡ್ಡು ಹಾಗೂ ಎಚ್.ಡಿ.ಕೋಟೆಗೂ ಸಂಪರ್ಕ ಕಲ್ಪಿಸುವುದರಿಂದ ಹೆಚ್ಚಿನ ಜನರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಅದರೆ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿವೆ.
ಅಲ್ಲದೆ ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದ್ದು, ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸಬೇಕಿದೆ.
-ಸಿದ್ಧಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…