Andolana originals

ಓದುಗರ ಪತ್ರ: ಕೆರೆ ಏರಿ ರಸ್ತೆ ಅಭಿವೃದ್ಧಿಪಡಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮದ ಸಮೀಪದ ಗುಡುಮಾನಹಳ್ಳಿ ಕೆರೆಯ ಏರಿಯ ಮೇಲಿನ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈ ಕೆರೆ ಸುಮಾರು 300-400 ಎಕರೆ ಕೃಷಿ ಭೂಮಿಗೆ ನೀರು ಪೂರೈಕ ಮಾಡುತ್ತಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದ ಭತ್ತ, ಜೋಳ, ಕಬ್ಬು, ಶುಂಠಿ ಹಾಗೂ ಇತರೆ ಬೆಳೆಗಳನ್ನು ಕಟಾವು ಮಾಡಿದ ನಂತರ ಇದೇ ಮಾರ್ಗವಾಗಿ ಮಾರುಕಟ್ಟೆಗಳಿಗೆ ರವಾನೆ ಮಾಡಬೇಕು,

ಅಲ್ಲದೆ ಈ ರಸ್ತೆ ಮಾಲಾರ ಕಾಲೋನಿ, ಮಂಡ್ಯ ಶೆಡ್ಡು ಹಾಗೂ ಎಚ್‌.ಡಿ.ಕೋಟೆಗೂ ಸಂಪರ್ಕ ಕಲ್ಪಿಸುವುದರಿಂದ ಹೆಚ್ಚಿನ ಜನರು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಅದರೆ ಈ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿವೆ.

ಅಲ್ಲದೆ ರಸ್ತೆ ಸಂಪೂರ್ಣವಾಗಿ ಕೆಸರುಮಯವಾಗಿರುವುದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದ್ದು, ಸಂಬಂಧಪಟ್ಟವರು ಕೂಡಲೇ ರಸ್ತೆಯನ್ನು ಅಭಿವೃದ್ಧಿಪಡಿಸಬೇಕಿದೆ.

-ಸಿದ್ಧಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ.

 

 

 

 

ಆಂದೋಲನ ಡೆಸ್ಕ್

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

30 mins ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

1 hour ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

2 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

6 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

6 hours ago