ಓದುಗರ ಪತ್ರ
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಮೆರುಗು ತಂದುಕೊಟ್ಟಿದ್ದ ಸಾಂಸ್ಕೃತಿಕ ನಗರಿಯ ಪರಂಪರೆ ಸಾರುವ ನಾಡ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸುವ ಕಾಳಜಿ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲವಾಗಿದೆ ಎಂದು ಹಿರಿಯ ಕುಸ್ತಿ ಪೈಲ್ವಾನರು ಕಳವಳ ವ್ಯಕ್ತಪಡಿಸಿರುವುದು ಬೇಸರದ ಸಂಗತಿ.
ಮೈಸೂರು ರಾಜ ಮನೆತನ ನೀಡಿದ ಪ್ರೋತ್ಸಾಹದಿಂದಾಗಿ ದೇಶ – ವಿದೇಶಗಳಲ್ಲಿ ಕುಸ್ತಿ ಕಲೆಯನ್ನು ಜನಪ್ರಿಯಗೊಳಿಸಿದ್ದ ಮೈಸೂರಿನ ಪೈಲ್ವಾನರ ಸಾಹಸ ಎಂದಿಗೂ ಮರೆಯಲಾಗುವುದಿಲ್ಲ. ಆದರೆ ಶ್ರೇಷ್ಠ ಪೈಲ್ವಾನರನ್ನು ನೀಡಿದ ಮೈಸೂರಿನ ಗರಡಿ ಮನೆಗಳನ್ನು ವರ್ಷದಿಂದ ವರ್ಷಕ್ಕೆ ಅವಾಸನದ ಅಂಚಿಗೆ ಸರಿಯುತ್ತಿರುವುದು ವಿಪರ್ಯಾಸವೇ ಸರಿ.
ಮಹಾರಾಜರ ಆಳ್ವಿಕೆಯಲ್ಲಿ ನೂರಾರು ಕಡೆ ಇದ್ದ ಗರಡಿ ಮನೆಗಳು ಈಗ ಕೆಲವು ಕಡೆ ಮಾತ್ರ ಇವೆ. ಇನ್ನಾದರೂ ಸರ್ಕಾರ, ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ಗರಡಿ ಮನೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಕುಸ್ತಿ ಕಲೆಯನ್ನು ಉಳಿಸಿ ಬೆಳೆಸಲು ಕ್ರಮ ಕೈಗೊಳ್ಳಬೇಕು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…
ರಾಜ್ಯಗಳ ಆಡಳಿತ ಸಂವಿಧಾನಬದ್ಧವಾಗಿ ನಡೆಯುವಂತೆ ಮೇಲುಸ್ತುವಾರಿಯಾಗಿ ಕೇಂದ್ರ ಸರ್ಕಾರದ ಶಿಫಾರಸಿನಂತೆ ರಾಷ್ಟ್ರಪತಿ ಅವರು ರಾಜ್ಯಪಾಲರನ್ನು ನೇಮಕ ಮಾಡುವುದು ೧೯೫೦ರಿಂದ ನಡೆದುಕೊಂಡು…
‘ಕುಸೂ ಕುಸೂ ಹೇಳಪ್ಪ ಹೇಳು ನನ್ನ ಕಂದಾ. ಅವ್ವಾ... ನಾಳಕ ಬಾವುಟದ ಹಬ್ಬ. ಬಾವುಟ ಏರಿಸೋ ಹಬ್ಬ. ಇಸ್ಕೂಲಿಗೆ ಹೊತ್ತಿಗೆ…
ಸಂವಿಧಾನ ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ವಾಸ್ತವದಲ್ಲಿ ನಾವು ಎಷ್ಟು ಮುಕ್ತರಾಗಿದ್ದೇವೆ? ಭ್ರಷ್ಟಾಚಾರ, ಪರಿಸರ ನಾಶ, ಮಾಲಿನ್ಯ ಹಾಗೂ…