ಓದುಗರ ಪತ್ರ
ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ ಚೌಕಟ್ಟಿನಿಂದ ಹೊರತಾಗಿರಲು ಸಾಧ್ಯವಿಲ್ಲ. ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು.
ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಪ್ರಕರಣಗಳು ಹಲವು ವರ್ಷಗಳ ಹಿಂದೆ ನಡೆದಿವೆ ಎನ್ನಲಾಗಿದ್ದು, ಎಸ್ಐಟಿಯು ಯಾವುದೇ ಹಸ್ತಕ್ಷೇಪಗಳಿಗೆ ಆಸ್ಪದ ನೀಡದೆ, ಪ್ರಭಾವಗಳಿಗೆ ಮಣಿಯದೆ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯವನ್ನು ಆದಷ್ಟು ಬೇಗ ಹೊರತರಬೇಕಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…
ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…
ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…
ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…
ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…
ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…