ಓದುಗರ ಪತ್ರ
ಪವಿತ್ರ ಯಾತ್ರಾ ಸ್ಥಳವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿರುವುದು ಸ್ವಾಗತಾರ್ಹ. ಈ ಪ್ರಕರಣಗಳ ಸತ್ಯಾಸತ್ಯತೆಗಳು ಏನೇ ಇರಲಿ, ಯಾವುದೇ ವ್ಯಕ್ತಿ ಹಾಗೂ ಸ್ಥಳ ಸಂವಿಧಾನದ ಚೌಕಟ್ಟಿನಿಂದ ಹೊರತಾಗಿರಲು ಸಾಧ್ಯವಿಲ್ಲ. ಕಾನೂನಿನಡಿಯಲ್ಲಿ ಎಲ್ಲರೂ ಸಮಾನರು.
ಈ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ. ಈ ಪ್ರಕರಣಗಳು ಹಲವು ವರ್ಷಗಳ ಹಿಂದೆ ನಡೆದಿವೆ ಎನ್ನಲಾಗಿದ್ದು, ಎಸ್ಐಟಿಯು ಯಾವುದೇ ಹಸ್ತಕ್ಷೇಪಗಳಿಗೆ ಆಸ್ಪದ ನೀಡದೆ, ಪ್ರಭಾವಗಳಿಗೆ ಮಣಿಯದೆ ಸಂಘ-ಸಂಸ್ಥೆಗಳು ಹಾಗೂ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯವನ್ನು ಆದಷ್ಟು ಬೇಗ ಹೊರತರಬೇಕಿದೆ.
– ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…