Andolana originals

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವತಿಯಿಂದ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅಮಾನವೀಯ. ಈ ಪ್ರತಿಭಟನೆ ವೇಳೆ ಸಂಸತ್ ಭವನಕ್ಕೆ ಭದ್ರತೆ ಒದಗಿಸಲು ನಿಯೋಜಿಸಿದ್ದ ಪೊಲೀಸರ ಸಮವಸ್ತ್ರದಲ್ಲಿ ‘ನೇಮ್ ಟ್ಯಾಗ್ (ಹೆಸರಿನ ಪಟ್ಟಿ)’ ಇರಲಿಲ್ಲವೇಕೆ? ವಾಹನಗಳ ಸಂಚಾರ ನಿಯಂತ್ರಣಕ್ಕೆ ನಿಯೋಜನೆಯಾಗುವ ಪೊಲೀಸರ ಸಮವಸ್ತ್ರದಲ್ಲೇ ನೇಮ್ ಟ್ಯಾಗ್ ಇರುತ್ತದೆ. ಇಂತಹ ದೊಡ್ಡ ಮಟ್ಟದ ಪ್ರತಿಭಟನೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ನೇಮ್ ಟ್ಯಾಗ್ ಇಲ್ಲವೆಂದರೆ ಹೇಗೆ? ಇದಲ್ಲದೆ, ಪ್ರತಿಭಟನೆ ದಿನ ಬೆಳಿಗ್ಗೆಯಿಂದಲೆ ಮೆಟ್ರೋದಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪರೋಕ್ಷವಾಗಿ ತಡೆಯೊಡ್ಡಲಾಗಿತ್ತು. ಅಂದರೆ ಸಂಸತ್ ಚಲೋಗೆ ಬರುವವರನ್ನು ನಿಯಂತ್ರಿಸುವ ಹುನ್ನಾರ ನಡೆದಿತ್ತೇ? ಮತ್ತು ಅಂದು ಹೊಸದಿಲ್ಲಿಯಲ್ಲಿ ಅಂತರ್ಜಾಲ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮೇಲೆ ನಡೆಸುವ ದೌರ್ಜನ್ಯ ಆ ಪ್ರದೇಶದಿಂದ ಹೊರಗೆ ಪ್ರಸಾರ ಆಗಬಾರದು ಎಂಬ ದುರಾಲೋಚನೆಯಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರಿಸುವವರು ಯಾರು? ಈ ಎಲ್ಲ ಬೆಳವಣಿಗೆಗಳನ್ನೂ ಗಮನಿಸಿದರೆ, ಸಿಜೆಪಿಯ ‘ಸಂಸತ್ ಚಲೋ’ಗೆ ಅಡ್ಡಿಪಡಿಸಲು ಕಾಣದಕೈಗಳು ಪ್ರಯತ್ನ ನಡೆಸಿದ್ದವು ಎಂಬ ಅನುಮಾನ ಬೃಹದಾಕಾರವಾಗಿ ಕಾಡುತ್ತಿದೆ. ಇದರ ಹಿಂದೆ ಯಾವುದೇ ಜನಪ್ರತಿನಿಧಿ, ರಾಜಕೀಯ ನಾಯಕರ ಹುನ್ನಾರ ಇಲ್ಲ ಎಂದು ನಾವು ಭಾವಿಸಬಹುದೇ?

-ಜಿ.ಜಯಪ್ರಕಾಶ್, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

9 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

18 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

18 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

18 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

18 hours ago

ಆಟಿಸಂ ಪೀಡಿತ ಮಕ್ಕಳ ಪೋಷಕರ ಆಶಾ ದೀಪ ನೇಹಾ ಟಂಡನ್

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ೩೮.೫ ಸಾವಿರ ಜನ ಇನ್ಸ್ಟಾಗ್ರಾಮ್ ಫಾಲೋವರ‍್ಸ್‌ಗೆ ಮಾರ್ಗದರ್ಶನ ೨೦೦೬ರ ಜೂನ್ ೩೦ ರಂದು ಹುಟ್ಟಿದ…

18 hours ago