Andolana originals

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವತಿಯಿಂದ ನಡೆದ ‘ಸಂಸತ್ ಚಲೋ’ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದು ಅಮಾನವೀಯ. ಈ ಪ್ರತಿಭಟನೆ ವೇಳೆ ಸಂಸತ್ ಭವನಕ್ಕೆ ಭದ್ರತೆ ಒದಗಿಸಲು ನಿಯೋಜಿಸಿದ್ದ ಪೊಲೀಸರ ಸಮವಸ್ತ್ರದಲ್ಲಿ ‘ನೇಮ್ ಟ್ಯಾಗ್ (ಹೆಸರಿನ ಪಟ್ಟಿ)’ ಇರಲಿಲ್ಲವೇಕೆ? ವಾಹನಗಳ ಸಂಚಾರ ನಿಯಂತ್ರಣಕ್ಕೆ ನಿಯೋಜನೆಯಾಗುವ ಪೊಲೀಸರ ಸಮವಸ್ತ್ರದಲ್ಲೇ ನೇಮ್ ಟ್ಯಾಗ್ ಇರುತ್ತದೆ. ಇಂತಹ ದೊಡ್ಡ ಮಟ್ಟದ ಪ್ರತಿಭಟನೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರಿಗೆ ನೇಮ್ ಟ್ಯಾಗ್ ಇಲ್ಲವೆಂದರೆ ಹೇಗೆ? ಇದಲ್ಲದೆ, ಪ್ರತಿಭಟನೆ ದಿನ ಬೆಳಿಗ್ಗೆಯಿಂದಲೆ ಮೆಟ್ರೋದಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ಪರೋಕ್ಷವಾಗಿ ತಡೆಯೊಡ್ಡಲಾಗಿತ್ತು. ಅಂದರೆ ಸಂಸತ್ ಚಲೋಗೆ ಬರುವವರನ್ನು ನಿಯಂತ್ರಿಸುವ ಹುನ್ನಾರ ನಡೆದಿತ್ತೇ? ಮತ್ತು ಅಂದು ಹೊಸದಿಲ್ಲಿಯಲ್ಲಿ ಅಂತರ್ಜಾಲ ಸಂಪರ್ಕವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮೇಲೆ ನಡೆಸುವ ದೌರ್ಜನ್ಯ ಆ ಪ್ರದೇಶದಿಂದ ಹೊರಗೆ ಪ್ರಸಾರ ಆಗಬಾರದು ಎಂಬ ದುರಾಲೋಚನೆಯಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರಿಸುವವರು ಯಾರು? ಈ ಎಲ್ಲ ಬೆಳವಣಿಗೆಗಳನ್ನೂ ಗಮನಿಸಿದರೆ, ಸಿಜೆಪಿಯ ‘ಸಂಸತ್ ಚಲೋ’ಗೆ ಅಡ್ಡಿಪಡಿಸಲು ಕಾಣದಕೈಗಳು ಪ್ರಯತ್ನ ನಡೆಸಿದ್ದವು ಎಂಬ ಅನುಮಾನ ಬೃಹದಾಕಾರವಾಗಿ ಕಾಡುತ್ತಿದೆ. ಇದರ ಹಿಂದೆ ಯಾವುದೇ ಜನಪ್ರತಿನಿಧಿ, ರಾಜಕೀಯ ನಾಯಕರ ಹುನ್ನಾರ ಇಲ್ಲ ಎಂದು ನಾವು ಭಾವಿಸಬಹುದೇ?

-ಜಿ.ಜಯಪ್ರಕಾಶ್, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

1 hour ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

2 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

8 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

8 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

8 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

8 hours ago