Andolana originals

ಓದುಗರ ಪತ್ರ: ಚಿತ್ರಮಂದಿರದಲ್ಲಿ ಶಿಸ್ತು, ಸಂಯಮ ಅಗತ್ಯ

ಇತ್ತೀಚೆಗೆ ರಿಷಭ್ ಶೆಟ್ಟಿ ನಿರ್ದೇಶಿಸಿ, ಅಭಿನಯಿಸಿರುವ ಕಾಂತಾರ ಚಾಪ್ಟರ್ ೧ ಚಲನಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಕೆಲವು ಅಭಿಮಾನಿಗಳು ಸಿನಿಮಾದಲ್ಲಿ ಬರುವ ದೈವದ ವೇಷಭೂಷಣ ಧರಿಸಿಕೊಂಡು ಬಂದು ಚಿತ್ರ ಮಂದಿರದ ಒಳಗೆ ಓಡಾಡುವುದು, ಕಿರುಚಾಡುವುದು ಹಾಗೂ ಮೈಮೇಲೆ ದೈವ ಬಂದಂತೆ ವರ್ತಿಸುತ್ತಿರುವುದರಿಂದ ಪ್ರೇಕ್ಷಕರು ತೊಂದರೆ ಅನುಭವಿಸುವಂತಾಗಿದೆ.

ಪ್ರತಿಯೊಬ್ಬರಿಗೂ ತಮಗೆ ಇಷ್ಟವಾದ ದೈವಗಳ ಬಗ್ಗೆ ಅಪಾರವಾದ ನಂಬಿಕೆ, ಪ್ರೀತಿ, ಕಾಳಜಿ ಇರುತ್ತದೆ. ಆದರೆ ಸಿನಿಮಾವನ್ನು ಸಿನಿಮಾವಾಗಿ ನೋಡಿ ಆನಂದಿಸಬೇಕೇ ಹೊರತು, ವಿನಾಕಾರಣ ದೈವ ಬಂದಂತೆ ವರ್ತಿಸಿ ಸಿನಿಮಾ ನೋಡುಗರಿಗೂ ತೊಂದರೆ ಕೊಡುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಚಿತ್ರಮಂದಿರಗಳಲ್ಲಿ ಶಿಸ್ತು ಬದ್ಧತೆಯಿಂದ ಸಿನಿಮಾ ನೋಡಿ ಕಣ್ತುಂಬಿಕೊಳ್ಳಬೇಕು. ಸಿನಿ ಪ್ರೇಕ್ಷಕರಿಗೆ ತೊಂದರೆ ಉಂಟಾಗುವಂತೆ ವರ್ತಿಸುವವರನ್ನು ಚಿತ್ರಮಂದಿರದಿಂದ ಹೊರಕ್ಕೆ ಕಳುಹಿಸಿ ಇವರಿಂದ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

7 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

7 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

7 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

7 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

7 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

7 hours ago