Andolana originals

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ ಪ್ರಯೋಗ ಅತ್ಯಂತ ಕೆಟ್ಟ ರೀತಿಯಲ್ಲಿದ್ದು, ಇಡೀ ಸಂಸದೀಯ ವ್ಯವಸ್ಥೆಗೆ ಅಪಚಾರವಾಗಿತ್ತು. ಓರ್ವ ಹಿರಿಯ ಸದಸ್ಯರು ಬಳಸಿದ ಭಾಷೆ ಅಸಂಸದೀಯವಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನ ಸಭೆಗಳಿಗೆ ಅತ್ಯಂತ ಮಹತ್ವದ ಸ್ಥಾನ ನೀಡಲಾಗಿದೆ. ರಾಜ್ಯದ ಜನರ ಕಲ್ಯಾಣಕ್ಕೆ ಪೂರಕವಾದ ಶಾಸನಗಳನ್ನು ರಚಿಸುವ ಮಹತ್ವದ ಜವಾಬ್ದಾರಿ ಕೂಡ ಅವರ ಮೇಲಿದೆ. ಸಭಾ ಕಲಾಪಗಳನ್ನು ದೂರದರ್ಶನ ಸೇರಿದಂತೆ ವಿವಿಧ ದೃಶ್ಯ ಮಾಧ್ಯಮಗಳು ನೇರ ಪ್ರಸಾರ ಮಾಡುತ್ತವೆ. ಪ್ರಮುಖ ಜವಾಬ್ದಾರಿಯನ್ನು ಹೊತ್ತಿರುವ ಜನಪ್ರತಿನಿಧಿಗಳ ನಡವಳಿಕೆಯನ್ನು ಇಡೀ ರಾಜ್ಯದ ಜನರು ಗಮನಿಸುತ್ತಿದ್ದಾರೆ.

ಉಭಯ ಸದನಗಳ ಸದಸ್ಯರು ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕೆ ಹೊರತು, ಬಾಯಿ ಚಪಲಕ್ಕಾಗಲಿ ಅಥವಾ ಪಕ್ಷದ ನಾಯಕರನ್ನು ಓಲೈಸುವುದಕ್ಕಾಗಿ ಆಡುವ ಇಂತಹ ಕೆಳಮಟ್ಟದ, ಸಭ್ಯತೆಯ ಎಲ್ಲೆಯನ್ನು ಮೀರುವ ಮಾತುಗಳು ತೀರಾ ಖಂಡನಾರ್ಹವಾಗಿವೆ. ಅನೇಕ ವೇಳೆ ಸಭಾಧ್ಯಕ್ಷರೇ ಮೂಕ ಪ್ರೇಕ್ಷಕರಾಗಿ ಇರಬೇಕಾದ ಸನ್ನಿವೇಶ ಎದುರಾಗಿದೆ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಶಾಸನ ಸಭೆಯಲ್ಲಿ ತಮ್ಮ ಘನತೆಗೆ ತಕ್ಕಂತೆ ಮಾತನಾಡುವ ಮೂಲಕ ಶಾಸನಸಭೆಯ ಗೌರವವನ್ನು ಕಾಪಾಡುವುದು ಅಗತ್ಯ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

10 mins ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

41 mins ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

5 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

8 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

8 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

9 hours ago