ಓದುಗರ ಪತ್ರ
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ ಪ್ರಯೋಗ ಅತ್ಯಂತ ಕೆಟ್ಟ ರೀತಿಯಲ್ಲಿದ್ದು, ಇಡೀ ಸಂಸದೀಯ ವ್ಯವಸ್ಥೆಗೆ ಅಪಚಾರವಾಗಿತ್ತು. ಓರ್ವ ಹಿರಿಯ ಸದಸ್ಯರು ಬಳಸಿದ ಭಾಷೆ ಅಸಂಸದೀಯವಾಗಿತ್ತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸನ ಸಭೆಗಳಿಗೆ ಅತ್ಯಂತ ಮಹತ್ವದ ಸ್ಥಾನ ನೀಡಲಾಗಿದೆ. ರಾಜ್ಯದ ಜನರ ಕಲ್ಯಾಣಕ್ಕೆ ಪೂರಕವಾದ ಶಾಸನಗಳನ್ನು ರಚಿಸುವ ಮಹತ್ವದ ಜವಾಬ್ದಾರಿ ಕೂಡ ಅವರ ಮೇಲಿದೆ. ಸಭಾ ಕಲಾಪಗಳನ್ನು ದೂರದರ್ಶನ ಸೇರಿದಂತೆ ವಿವಿಧ ದೃಶ್ಯ ಮಾಧ್ಯಮಗಳು ನೇರ ಪ್ರಸಾರ ಮಾಡುತ್ತವೆ. ಪ್ರಮುಖ ಜವಾಬ್ದಾರಿಯನ್ನು ಹೊತ್ತಿರುವ ಜನಪ್ರತಿನಿಧಿಗಳ ನಡವಳಿಕೆಯನ್ನು ಇಡೀ ರಾಜ್ಯದ ಜನರು ಗಮನಿಸುತ್ತಿದ್ದಾರೆ.
ಉಭಯ ಸದನಗಳ ಸದಸ್ಯರು ತಮ್ಮ ಘನತೆಗೆ ತಕ್ಕಂತೆ ಮಾತನಾಡಬೇಕೆ ಹೊರತು, ಬಾಯಿ ಚಪಲಕ್ಕಾಗಲಿ ಅಥವಾ ಪಕ್ಷದ ನಾಯಕರನ್ನು ಓಲೈಸುವುದಕ್ಕಾಗಿ ಆಡುವ ಇಂತಹ ಕೆಳಮಟ್ಟದ, ಸಭ್ಯತೆಯ ಎಲ್ಲೆಯನ್ನು ಮೀರುವ ಮಾತುಗಳು ತೀರಾ ಖಂಡನಾರ್ಹವಾಗಿವೆ. ಅನೇಕ ವೇಳೆ ಸಭಾಧ್ಯಕ್ಷರೇ ಮೂಕ ಪ್ರೇಕ್ಷಕರಾಗಿ ಇರಬೇಕಾದ ಸನ್ನಿವೇಶ ಎದುರಾಗಿದೆ. ಇನ್ನು ಮುಂದಾದರೂ ಜನಪ್ರತಿನಿಧಿಗಳು ಶಾಸನ ಸಭೆಯಲ್ಲಿ ತಮ್ಮ ಘನತೆಗೆ ತಕ್ಕಂತೆ ಮಾತನಾಡುವ ಮೂಲಕ ಶಾಸನಸಭೆಯ ಗೌರವವನ್ನು ಕಾಪಾಡುವುದು ಅಗತ್ಯ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…