Andolana originals

ಓದುಗರ ಪತ್ರ| “ಅರ್ಜುನ’ನ ಸ್ತಬ್ದಚಿತ್ರ ಪ್ರದರ್ಶಿಸಿ

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು.

2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿದ್ದ. ಈ ವರ್ಷವೂ ನಿಶಾನೆ ಆನೆಯಾಗಿ ಭಾಗಿಯಾಗುವ ನಿರೀಕ್ಷೆ ಇತ್ತು.

ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು.

ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ. ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಆತನನ್ನು ಸ್ಮರಿಸಬೇಕು.

– ಅಖಿಲೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

41 mins ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

2 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

2 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

3 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

3 hours ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಕಸವೋ ಕಸ!

ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…

6 hours ago