Andolana originals

ಓದುಗರ ಪತ್ರ| “ಅರ್ಜುನ’ನ ಸ್ತಬ್ದಚಿತ್ರ ಪ್ರದರ್ಶಿಸಿ

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು.

2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ ಆನೆಯಾಗಿ ಗಜಪಡೆಯನ್ನು ಮುನ್ನಡೆಸಿದ್ದ. ಈ ವರ್ಷವೂ ನಿಶಾನೆ ಆನೆಯಾಗಿ ಭಾಗಿಯಾಗುವ ನಿರೀಕ್ಷೆ ಇತ್ತು.

ಸರ್ಕಾರ ಸಕಲೇಶಪುರದ ಅರಣ್ಯ ಪ್ರದೇಶದಲ್ಲಿ ಅರ್ಜುನ ಆನೆಯ ಅಂತ್ಯಕ್ರಿಯೆಯನ್ನು ಮಾಡಿದ್ದು, ಸಮಾಧಿ ಸ್ಥಳದಲ್ಲಿ ಹಾಗೂ ಅರ್ಜುನನ ವಾಸಸ್ಥಳವಾಗಿದ್ದ ಎಚ್.ಡಿ.ಕೋಟೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಿಸುವುದಾಗಿ ತಿಳಿಸಿತ್ತು.

ಆದರೆ ಈವರೆಗೂ ಸ್ಮಾರಕ ನಿರ್ಮಾಣದ ಕಾಮಗಾರಿಯೇ ಪ್ರಾರಂಭವಾಗಿಲ್ಲ. ಅರ್ಜುನ ದಸರಾದಲ್ಲಿ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ. ಇಂತಹ ಆನೆಗೆ ಗೌರವ ಸೂಚಿಸಬೇಕಾದದ್ದು ಸರ್ಕಾರದ ಕರ್ತವ್ಯ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವದಲ್ಲಿ ಅರ್ಜುನ ಆನೆಯ ಸ್ತಬ್ಧಚಿತ್ರ ಪ್ರದರ್ಶಿಸುವ ಮೂಲಕ ಆತನನ್ನು ಸ್ಮರಿಸಬೇಕು.

– ಅಖಿಲೇಶ್, ಅಂತರಸಂತೆ, ಎಚ್.ಡಿ.ಕೋಟೆ ತಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

5 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

5 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

5 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

5 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

5 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

5 hours ago