ಓದುಗರ ಪತ್ರ
ನವರಾತ್ರಿ ಉತ್ಸವದ ಅಂಗವಾಗಿ ಮೈಸೂರಿನ ನಾನಾ ಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರಿಗೆ ಪಾಸ್ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಪಾಸ್ಗಳ ಪೈಕಿ ಬಹುತೇಕ ಪಾಸ್ಗಳನ್ನು ನಗರ ಭಾಗದವರೇ ಪಡೆದುಕೊಳ್ಳುತ್ತಿದ್ದು, ಗ್ರಾಮೀಣ ಭಾಗದವರಿಗೆ ಈ ಪಾಸ್ಗಳು ಎಲ್ಲಿ ಸಿಗುತ್ತವೆ? ಹೇಗೆ ಖರೀದಿಸಬೇಕು? ಎಂಬುದೇ ತಿಳಿಯುತ್ತಿಲ್ಲ. ಸರ್ಕಾರ ಪ್ರತಿ ಬಾರಿಯೂ ಇದು ಜನಸಾಮಾನ್ಯರ ದಸರಾವಾಗಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದೆಯೇ ವಿನಾ ಈವರೆಗೂ ಜನಸಾಮಾನ್ಯರ ದಸರಾ ಆಗಿಲ್ಲ. ಯುವ ದಸರಾ, ಯುವ ಸಂಭ್ರಮ, ಜಂಬೂ ಸವಾರಿ, ಪಂಜಿನ ಕವಾಯತಿನಂತಹ ಪ್ರಮುಖ ಕಾರ್ಯಕ್ರಮಗಳ ಹೆಚ್ಚಿನ ಪಾಲು ಪಾಸ್ಗಳು ಜನಪ್ರತಿನಿಧಿಗಳ ಕೈ ಸೇರುತ್ತಿವೆ. ಇದರಿಂದಾಗಿ ದಸರಾ ಕಣ್ತುಂಬಿಕೊಳ್ಳಬೇಕು ಎಂದು ಬರುವ ಗ್ರಾಮೀಣ ಭಾಗದ ಜನರು ಪಾಸ್ ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ದೂರದಿಂದ ನಿಂತು ನೋಡಿ ಹೋಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಈ ಬಾರಿಯಾದರೂ ಜಿಲ್ಲಾಡಳಿತ ತಾಲ್ಲೂಕು ಮಟ್ಟದಲ್ಲಿಯೂ ದಸರಾ ಕಾರ್ಯಕ್ರಮಗಳ ಪಾಸ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
-ವಿನೋದ್ ಕುಮಾರ್, ಕೊಡಸೀಗೆ, ಎಚ್.ಡಿ.ಕೋಟೆ ತಾ
ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…
ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…
ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್…
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…