ಓದುಗರ ಪತ್ರ
ನವರಾತ್ರಿ ಉತ್ಸವದ ಅಂಗವಾಗಿ ಮೈಸೂರಿನ ನಾನಾ ಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಈ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರಿಗೆ ಪಾಸ್ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಪಾಸ್ಗಳ ಪೈಕಿ ಬಹುತೇಕ ಪಾಸ್ಗಳನ್ನು ನಗರ ಭಾಗದವರೇ ಪಡೆದುಕೊಳ್ಳುತ್ತಿದ್ದು, ಗ್ರಾಮೀಣ ಭಾಗದವರಿಗೆ ಈ ಪಾಸ್ಗಳು ಎಲ್ಲಿ ಸಿಗುತ್ತವೆ? ಹೇಗೆ ಖರೀದಿಸಬೇಕು? ಎಂಬುದೇ ತಿಳಿಯುತ್ತಿಲ್ಲ. ಸರ್ಕಾರ ಪ್ರತಿ ಬಾರಿಯೂ ಇದು ಜನಸಾಮಾನ್ಯರ ದಸರಾವಾಗಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದೆಯೇ ವಿನಾ ಈವರೆಗೂ ಜನಸಾಮಾನ್ಯರ ದಸರಾ ಆಗಿಲ್ಲ. ಯುವ ದಸರಾ, ಯುವ ಸಂಭ್ರಮ, ಜಂಬೂ ಸವಾರಿ, ಪಂಜಿನ ಕವಾಯತಿನಂತಹ ಪ್ರಮುಖ ಕಾರ್ಯಕ್ರಮಗಳ ಹೆಚ್ಚಿನ ಪಾಲು ಪಾಸ್ಗಳು ಜನಪ್ರತಿನಿಧಿಗಳ ಕೈ ಸೇರುತ್ತಿವೆ. ಇದರಿಂದಾಗಿ ದಸರಾ ಕಣ್ತುಂಬಿಕೊಳ್ಳಬೇಕು ಎಂದು ಬರುವ ಗ್ರಾಮೀಣ ಭಾಗದ ಜನರು ಪಾಸ್ ಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳನ್ನು ದೂರದಿಂದ ನಿಂತು ನೋಡಿ ಹೋಗುವ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ಈ ಬಾರಿಯಾದರೂ ಜಿಲ್ಲಾಡಳಿತ ತಾಲ್ಲೂಕು ಮಟ್ಟದಲ್ಲಿಯೂ ದಸರಾ ಕಾರ್ಯಕ್ರಮಗಳ ಪಾಸ್ಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು.
-ವಿನೋದ್ ಕುಮಾರ್, ಕೊಡಸೀಗೆ, ಎಚ್.ಡಿ.ಕೋಟೆ ತಾ
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…