ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ ಸೀರೆ ಹಾಗೂ ವರ್ಷಾಂತ್ಯದೊಳಗೆ ಎರಡು ಕಾಟನ್ ಸೀರೆಗಳನ್ನು ನೀಡಲಾಗುತ್ತಿದ್ದು ಪುರುಷರಿಗೆ ಪ್ಯಾಂಟ್, ಶರ್ಟ್ ಹಾಗೂ ಹತ್ತು ಹಲವಾರು ರೀತಿಯ ಸುರಕ್ಷತಾ ಪರಿಕರಗಳನ್ನು ಕೊಡಲಾಗುವುದು ಎಂದು ನಗರಪಾಲಿಕೆ ಆಡಳಿತಾಧಿಕಾರಿ ನಿತೇಶ್ ಪಾಟೀಲ್ ಅವರು ಹೇಳಿರುವುದು ಶ್ಲಾಘನೀಯ. ಈ ಬಾರಿಯ ದಸರಾ ಮಹೋತ್ಸವಕ್ಕೂ ಮುನ್ನ ಪಾದಚಾರಿಗಳಿಗೆ ತೊಂದರೆಯಾಗದಂತೆ, ಶೇ.೩೦ರಷ್ಟು ಸ್ಥಳ ವ್ಯಾಪಾರಸ್ಥರಿಗೆ ಹಾಗೂ ಶೇ.೭೦ರಷ್ಟು ಪಾದಚಾರಿಗಳಿಗೆ ಮುಕ್ತವಾಗಿರಬೇಕು ಎಂದು ಮಹಾನಗರ ಪಾಲಿಕೆಯ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡಾಸ್ತ್ರ ಪ್ರಯೋಗಿಸಿ ಎಂದು ಹೇಳಿರುವುದು ಒಳ್ಳೆಯ ಬೆಳವಣಿಗೆ. ಇದು ನಿರಂತರ ಪ್ರಕ್ರಿಯೆಯಾಗಬೇಕು.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು



