ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ ಸೂಚನೆ ನೀಡಿರುವುದು ಸ್ವಾಗತಾರ್ಹ.
ಏಕೆಂದರೆ ಕೆಲ ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು, ಸಿಬ್ಬಂದಿಗಳು ತಡವಾಗಿ ಬಂದು ನಿಗದಿತ ಸಮಯಕ್ಕಿಂತ ಮೊದಲೇ ಕಚೇರಿಯಿಂದ ಹೊರಡುತ್ತಾರೆ. ಮುಖ್ಯಮಂತ್ರಿಗಳ ಸೂಚನೆಯಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಈ ಆದೇಶವನ್ನು ತಕ್ಷಣದಿಂದಲೇ ಜರಿಗೆ ಬರುವಂತೆ ಆದೇಶಿಸಲಿ .
-ನಾಗೇಶ್, ಮೈಸೂರು



