ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೊಂದು ಪಾರಂಪರಿಕ ಸ್ಥಳವೂ ಆಗಿದೆ. ಆದರೆ ಕೆಲವು ದಿನಗಳ ಹಿಂದೆ ದೇವಾಲಯದ ಸನಿಹವೇ ನೂತನವಾಗಿ ಒಂದು ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ, ಸಾಕಷ್ಟು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನಿರ್ಮಾಣ ಮಾಡುತ್ತಿರುವ ಕಟ್ಟಡದಿಂದ ದೇವಾಲಯದ ಪಾರಂಪರಿಕ ಗೋಪುರವೇ ಕಾಣದಂತೆ ಮರೆ ಮಾಡಲಾಗುತ್ತಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ನೂತನ ಕಟ್ಟಡ ಕಾಮಗಾರಿಯಿಂದ ದೇವಾಲಯದ ಐತಿಹಾಸಿಕ ಗೋಪುರದ ಅಸ್ತಿತ್ವಕ್ಕೆ ತೊಂದರೆ ಯಾಗಲಿದೆಯೆ? ಎಂಬ ಬಗ್ಗೆ ಸಂಬಂಧಪಟ್ಟವರು ಜನರಿಗೆ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ ಗೋಪುರಕ್ಕೆ ತೊಂದರೆಯಾಗುವುದಾದರೆ ಇದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…