ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೊಂದು ಪಾರಂಪರಿಕ ಸ್ಥಳವೂ ಆಗಿದೆ. ಆದರೆ ಕೆಲವು ದಿನಗಳ ಹಿಂದೆ ದೇವಾಲಯದ ಸನಿಹವೇ ನೂತನವಾಗಿ ಒಂದು ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ, ಸಾಕಷ್ಟು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನಿರ್ಮಾಣ ಮಾಡುತ್ತಿರುವ ಕಟ್ಟಡದಿಂದ ದೇವಾಲಯದ ಪಾರಂಪರಿಕ ಗೋಪುರವೇ ಕಾಣದಂತೆ ಮರೆ ಮಾಡಲಾಗುತ್ತಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ನೂತನ ಕಟ್ಟಡ ಕಾಮಗಾರಿಯಿಂದ ದೇವಾಲಯದ ಐತಿಹಾಸಿಕ ಗೋಪುರದ ಅಸ್ತಿತ್ವಕ್ಕೆ ತೊಂದರೆ ಯಾಗಲಿದೆಯೆ? ಎಂಬ ಬಗ್ಗೆ ಸಂಬಂಧಪಟ್ಟವರು ಜನರಿಗೆ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ ಗೋಪುರಕ್ಕೆ ತೊಂದರೆಯಾಗುವುದಾದರೆ ಇದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಮುಂಬರುವ ಪಠ್ಯಪುಸ್ತಕ ತಯಾರಿ ಅಥವಾ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಜೀವನ ಮತ್ತು ಸಾಧನೆಗಳ ಕುರಿತ ವಿಷಯಗಳನ್ನು…
ವರದಿಗಳ ಪ್ರಕಾರ ಸಾರ್ವಜನಿಕ ಗ್ರಂಥಾಲಯಗಳಲ್ಲಿ, ಕಳೆದ ನಾಲ್ಕು ವರ್ಷಗಳಿಂದ ಹೊಸ ಸಾಹಿತ್ಯ ಕೃತಿಗಳ ಖರೀದಿಯೇ ನಡೆದಿಲ್ಲ ಎಂಬುದು ಆತಂಕಕಾರಿ. ಸ್ಥಳೀಯ…
ಸಾವಿರಾರು ಮಂದಿ ಭಕ್ತರು ಭಾಗಿ: ವಿವಿಧ ಸೇವೆಗಳನ್ನು ಸಲ್ಲಿಸಿದ ಭಕ್ತಾದಿಗಳು ಯಳಂದೂರು: ತಾಲ್ಲೂಕಿನ ಐತಿಹಾಸಿಕ ಪುರಾಣ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದಲ್ಲಿರುವ…
ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಜನರು; ಶಾಸಕರೂ ಸೇರಿದಂತೆ ಗಣ್ಯರು ಭಾಗಿ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಶ್ರೀರಾಮದೇವರ ರಥೋತ್ಸವ…
ಎಸ್.ಎಸ್.ಭಟ್ ನಂಜನಗೂಡು: ತ್ರಿವಿಧ ದಾಸೋಹಕ್ಕೆ ಹೆಸರಾದ ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನೇ ನಡೆಸದೆ ನಕಲಿ ಜಿಪಿಎಸ್ ದಾಖಲಾತಿ ಸಲ್ಲಿಸಿದ ಗುತ್ತಿಗೆ ಸಂಸ್ಥೆಯೊಂದು…