ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೊಂದು ಪಾರಂಪರಿಕ ಸ್ಥಳವೂ ಆಗಿದೆ. ಆದರೆ ಕೆಲವು ದಿನಗಳ ಹಿಂದೆ ದೇವಾಲಯದ ಸನಿಹವೇ ನೂತನವಾಗಿ ಒಂದು ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ, ಸಾಕಷ್ಟು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನಿರ್ಮಾಣ ಮಾಡುತ್ತಿರುವ ಕಟ್ಟಡದಿಂದ ದೇವಾಲಯದ ಪಾರಂಪರಿಕ ಗೋಪುರವೇ ಕಾಣದಂತೆ ಮರೆ ಮಾಡಲಾಗುತ್ತಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ನೂತನ ಕಟ್ಟಡ ಕಾಮಗಾರಿಯಿಂದ ದೇವಾಲಯದ ಐತಿಹಾಸಿಕ ಗೋಪುರದ ಅಸ್ತಿತ್ವಕ್ಕೆ ತೊಂದರೆ ಯಾಗಲಿದೆಯೆ? ಎಂಬ ಬಗ್ಗೆ ಸಂಬಂಧಪಟ್ಟವರು ಜನರಿಗೆ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ ಗೋಪುರಕ್ಕೆ ತೊಂದರೆಯಾಗುವುದಾದರೆ ಇದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…