ವಿಶ್ವ ವಿಖ್ಯಾತಿ ಹೊಂದಿರುವ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನಕ್ಕೆ ರಾಜ್ಯ, ದೇಶದ ವಿವಿಧ ಭಾಗಗಳಿಂದ ಮಾತ್ರವಲ್ಲದೆ, ವಿದೇಶಿಗರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಅಲ್ಲದೆ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾರಣದಿಂದ ಸರ್ಕಾರಿ ಮತ್ತು ಇತರೇ ರಜಾ ದಿನಗಳಲ್ಲಿಯೂ ಕುಟುಂಬ ಸಮೇತರಾಗಿ ಈ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಇದೊಂದು ಪಾರಂಪರಿಕ ಸ್ಥಳವೂ ಆಗಿದೆ. ಆದರೆ ಕೆಲವು ದಿನಗಳ ಹಿಂದೆ ದೇವಾಲಯದ ಸನಿಹವೇ ನೂತನವಾಗಿ ಒಂದು ಕಟ್ಟಡ ಕಾಮಗಾರಿ ನಡೆಯುತ್ತಿರುವುದರಿಂದ, ಸಾಕಷ್ಟು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ನಿರ್ಮಾಣ ಮಾಡುತ್ತಿರುವ ಕಟ್ಟಡದಿಂದ ದೇವಾಲಯದ ಪಾರಂಪರಿಕ ಗೋಪುರವೇ ಕಾಣದಂತೆ ಮರೆ ಮಾಡಲಾಗುತ್ತಿದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ನೂತನ ಕಟ್ಟಡ ಕಾಮಗಾರಿಯಿಂದ ದೇವಾಲಯದ ಐತಿಹಾಸಿಕ ಗೋಪುರದ ಅಸ್ತಿತ್ವಕ್ಕೆ ತೊಂದರೆ ಯಾಗಲಿದೆಯೆ? ಎಂಬ ಬಗ್ಗೆ ಸಂಬಂಧಪಟ್ಟವರು ಜನರಿಗೆ ಸ್ಪಷ್ಟನೆ ನೀಡಬೇಕಿದೆ. ಒಂದು ವೇಳೆ ಗೋಪುರಕ್ಕೆ ತೊಂದರೆಯಾಗುವುದಾದರೆ ಇದರ ಬಗ್ಗೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಬೇಕಿದೆ.
– ಬಿ.ಎಸ್.ಸಾಯಿ ಸಂದೇಶ್, ಮೈಸೂರು
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…