ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುವುದು, ವ್ಹೀಲಿಂಗ್ ಮಾಡುವುದು ಹಾಗೂ ದ್ವಿಚಕ್ರ ವಾಹನದಲ್ಲಿ ಮೂರು ಜನರು ತೆರಳುವುದು (ತ್ರಿಬಲ್ ರೈಡಿಂಗ್) ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಜೀವ ಹಾನಿಯಾಗಿರುವ ಪ್ರಕರಣಗಳೂ ನಡೆದಿವೆ.
ಅಪ್ರಾಪ್ತರು ವಾಹನ ಚಾಲನೆ ಮಾಡಿದ್ದು ಕಂಡು ಬಂದರೆ ವಾಹನ ಮಾಲೀಕರಿಗೆ ಪೊಲೀಸರು ೨೫ ಸಾವಿರ ರೂ. ದಂಡ ವಿಧಿಸುತ್ತಿದ್ದರೂ ಪೋಷಕರು ತಮ್ಮ ಮಕ್ಕಳ ಕೈಗೆ ವಾಹನ ನೀಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಪೋಷಕರು ತಮ್ಮ ಮಕ್ಕಳು ಚಾಲನಾ ಪರವಾನಗಿ ಪಡೆದ ನಂತರವೇ ಅವರ ಕೈಗೆ ವಾಹನ ನೀಡಬೇಕು. ೧೮ಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡಬಾರದು ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಶಾಲಾ -ಕಾಲೇಜುಗಳಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…