ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತರು ವಾಹನ ಚಾಲನೆ ಮಾಡುವುದು, ವ್ಹೀಲಿಂಗ್ ಮಾಡುವುದು ಹಾಗೂ ದ್ವಿಚಕ್ರ ವಾಹನದಲ್ಲಿ ಮೂರು ಜನರು ತೆರಳುವುದು (ತ್ರಿಬಲ್ ರೈಡಿಂಗ್) ಹೆಚ್ಚಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಅಡ್ಡಾದಿಡ್ಡಿ ವಾಹನ ಚಾಲನೆ ಮಾಡಿ ಜೀವ ಹಾನಿಯಾಗಿರುವ ಪ್ರಕರಣಗಳೂ ನಡೆದಿವೆ.
ಅಪ್ರಾಪ್ತರು ವಾಹನ ಚಾಲನೆ ಮಾಡಿದ್ದು ಕಂಡು ಬಂದರೆ ವಾಹನ ಮಾಲೀಕರಿಗೆ ಪೊಲೀಸರು ೨೫ ಸಾವಿರ ರೂ. ದಂಡ ವಿಧಿಸುತ್ತಿದ್ದರೂ ಪೋಷಕರು ತಮ್ಮ ಮಕ್ಕಳ ಕೈಗೆ ವಾಹನ ನೀಡುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಪೋಷಕರು ತಮ್ಮ ಮಕ್ಕಳು ಚಾಲನಾ ಪರವಾನಗಿ ಪಡೆದ ನಂತರವೇ ಅವರ ಕೈಗೆ ವಾಹನ ನೀಡಬೇಕು. ೧೮ಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡಬಾರದು ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡುವ ಬಗ್ಗೆ ಪೊಲೀಸ್ ಇಲಾಖೆಯಿಂದ ಶಾಲಾ -ಕಾಲೇಜುಗಳಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ.
-ಬಿ.ಗಣೇಶ, ಕೆ.ಜಿ.ಕೊಪ್ಪಲು, ಮೈಸೂರು
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…