Andolana originals

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ ಸಂತೋಷ ಹಾಗೂ ನೆಮ್ಮದಿಯನ್ನು ಹಣದಿಂದ ಕೊಳ್ಳಲು ಸಾಧ್ಯವಿಲ್ಲ. ಹಣ ಅತಿಯಾದಾಗ ಅದರ ಸರಿಯಾದ ನಿರ್ವಹಣೆ ಇಲ್ಲದಿದ್ದರೆ ಅದು ಕೆಲಸ, ನೆಮ್ಮದಿ ಹಾಗೂ ಪ್ರಾಣವನ್ನೂ ಕಸಿದುಕೊಳ್ಳಬಹುದು ಎಂಬುದಕ್ಕೆ ಸಿ.ಜೆ.ರಾಯ್ ಅವರ ಆತ್ಮಹತ್ಯೆಯೇ ಉದಾಹರಣೆಯಾಗಿದೆ. ಹಣವನ್ನು ಸಂಪಾದಿಸುವುದಷ್ಟೇ ಅಲ್ಲ, ಅದನ್ನು ಆನಂದಿಸುವ ಹಕ್ಕೂ ನನ್ನದು ಎಂಬ ಸಂದೇಶವನ್ನು ರಾಯ್ ಸ್ಪಷ್ಟವಾಗಿ ನೀಡುತ್ತಿದ್ದರು. ಮುಖ್ಯವಾಗಿ ಯುವಕರಿಗೆ ಸ್ಛೂರ್ತಿದಾಯಕ ವ್ಯಕ್ತಿಯಾಗಿದ್ದರು. ಸಾಮಾನ್ಯ ಹಿನ್ನೆಲೆಯಿಂದ ಬಂದವನೂ ದೊಡ್ಡ ಮಟ್ಟದಲ್ಲಿ ಗೆಲ್ಲಬಹುದು ಎಂಬ ಭರವಸೆಯನ್ನು ಮೂಡಿಸಿದ್ದರು. ನಿರಂತರ ವಿಚಾರಣೆ ಮತ್ತು ಒತ್ತಡವೇ ಈ ದುರ್ಘಟನೆಗೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡುಬಂದರೂ, ಉದ್ಯಮಿಗಳಿಗೆ ಐಟಿಯ ಒತ್ತಡ ಹಾಗೂ ತಲೆಬಿಸಿ ಹೊಸದೇನು ಅಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಒಂದು ಶಾಲೆಯ ಮುಂಭಾಗ ಕುಳಿತು ಜಗತ್ತನ್ನು ಗೆಲ್ಲುವ ಕನಸು ಕಂಡ ಆ ಬಾಲಕ, ಇಂದು ಆ ಕನಸುಗಳ ಭಾರವನ್ನೇ ಹೊತ್ತುಕೊಂಡು ಜಗತ್ತಿಗೆ ವಿದಾಯ ಹೇಳಿರುವುದು ವಿಪರ್ಯಾಸ. ಕಾನ್ಛಿಡೆಂಟ್ ಹೆಸರಿನ ದೊಡ್ಡ ಗ್ರೂಪ್ ಅನ್ನು ಹುಟ್ಟು ಹಾಕಿದ್ದ ವ್ಯಕ್ತಿಯ ಜೀವನದಲ್ಲಿ ಬದುಕುವ ಕಾನ್ಛಿಡೆಂಟ್ ಇಲ್ಲದಂತಾಗಿದ್ದು ದುರಂತವೇ ಸರಿ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

11 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

12 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

14 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

14 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

17 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

18 hours ago